Andolana originals

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ ದೇಶದೊಂದಿಗೆ ಹಲವಾರು ಮಹತ್ವದ ಒಪ್ಪಂದಗಳನ್ನು ಭಾರತ ಮಾಡಿಕೊಂಡಿದೆ. ರಷ್ಯಾದಿಂದ ತೈಲಮ ಖರೀದಿಸಬಾರದು ಎಂಬ ಅಮೆರಿಕದ ಫರ್ಮಾನಿನ ನಡುವೆಯೇ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಆರ್ಥಿಕ ಮತ್ತು ವ್ಯಾಪಾರ ಪಾಲುದಾರಿಕೆಯನ್ನು ಮತ್ತಷ್ಟು ಬಲ ಪಡಿಸುವ ಉದ್ದೇಶದಿಂದ ‘ಮುನ್ನೋಟ- ೨೦೩೦’ ಎಂಬ ಒಪ್ಪಂದಕ್ಕೆ ಉಭಯ ದೇಶಗಳ ನಾಯಕರು ಸಹಿ ಹಾಕಿದ್ದಾರೆ. ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ವಿಮಾನ ನಿಲ್ದಾಣಕ್ಕೆ ತೆರಳಿ ಪುಟಿನ್ ಅವರನ್ನು ಸ್ವಾಗತಿಸಿದ್ದಾರೆ. ವಿಶ್ವ ಭೂಪಟದಲ್ಲಿ, ರಷ್ಯಾ ಹಾಗೂ ಭಾರತಕ್ಕೆ ತಮ್ಮದೇ ಆದ ವಿಶಿಷ್ಟ ರೀತಿಯ ಸ್ಥಾನಮಾನಗಳಿವೆ.

ಅಮೆರಿಕ ಮತ್ತು ಚೀನಾದ ನಂತರ ಅತ್ಯಂತ ಬಲಿಷ್ಠ ಮತ್ತು ಬಲಾಢ್ಯ ರಾಷ್ಟ್ರವೆನಿಸಿರುವ ರಷ್ಯಾ ಪರಮಾಣ ಅಸ್ತ್ರಗಳನ್ನು ಹೊಂದಿರುವ ದೇಶವಾಗಿದೆ. ಭಾರತ ಕೂಡ ಅತಿ ವೇಗದಲ್ಲಿ ಬೆಳೆಯುತ್ತಿರುವ ರಾಷ್ಟ್ರವಾಗಿದ್ದು, ವಿಶ್ವದ ನಾಲ್ಕನೆಯ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತ ಸೇರಿದಂತೆ ಅಮೆರಿಕದ ವಿಶ್ವದ ಹಲವಾರು ದೇಶಗಳ ಮೇಲೆ ದುಬಾರಿ ತೆರಿಗೆ ವಿಽಸಿ ಅಟ್ಟಹಾಸ ಮೆರೆಯುತ್ತಿರುವ ಸಂಧರ್ಭದಲ್ಲೇ ಭಾರತ ಮತ್ತು ರಷ್ಯಾ ಅತ್ಯಂತ ನಿಕಟ ಮಿತ್ರ ರಾಷ್ಟ್ರಗಳಾಗಿ ಹೊರಹೊಮ್ಮಿವೆ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

1 hour ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

4 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

4 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

5 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

18 hours ago