ಓದುಗರ ಪತ್ರ
ಮೈಸೂರು ನಗರದ ಅಗ್ರಹಾರ ಬಡಾವಣೆಯ ರಾಮಾನುಜ ರಸ್ತೆಯ ೭ನೇ ಮತ್ತು ೮ನೇ ಕ್ರಾಸ್ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ಗೆ ಆಧಾರವಾಗಿ ಅಳವಡಿಸಿರುವ ಕಬ್ಬಿಣದ ಕಂಬವು ಬಹುಪಾಲು ತುಕ್ಕು ಹಿಡಿದು ಉದುರುತ್ತಿದ್ದು, ಭಾರೀ ಅನಾಹುತಕ್ಕೆ ಕಾದುನಿಂತಿದೆ. ಈ ಕಂಬವು ವಿದ್ಯುತ್ ಟ್ರಾನ್ಸ್ ಫಾರ್ಮರ್ನ ಸಂಪೂರ್ಣ ಭಾರವನ್ನು ಹೊತ್ತು ನಿಂತಿದೆ. ಆದರೆ ಕಂಬದ ತಳಭಾಗ ಬಹುಪಾಲು ತುಕ್ಕುಹಿಡಿದು ಉದುರುತ್ತಿರುವುದರಿಂದ ಕುಸಿದು ಬೀಳುವ ಹಂತದಲ್ಲಿದೆ.
ಈಗ ಮಳೆಗಾಲವಾದ್ದರಿಂದ ಕಂಬ ಮತ್ತಷ್ಟು ತುಕ್ಕು ಹಿಡಿದು ದುರ್ಬಲಗೊಳ್ಳುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಕಂಬ ಸಂಪೂರ್ಣ ತುಕ್ಕು ಹಿಡಿದು ದುರ್ಬಲಗೊಂಡು ಕುಸಿದರೆ, ಟ್ರಾನ್ಸ್ ಫಾರ್ಮರ್ ನೆಲಕ್ಕುರುಳಲಿದ್ದು, ಭಾರಿ ಅನಾಹುತ ಸಂಭವಿಸಲಿದೆ ಎಂದು ರಸ್ತೆಯ ಅಕ್ಕಪಕ್ಕದ ಮನೆಗಳವರು ಆತಂಕಗೊಂಡಿದ್ದಾರೆ.ಸಾರ್ವಜನಿಕರು ಈ ರಸ್ತೆಯಲ್ಲಿ ಪ್ರಾಣ ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಾದ ಪರಿಸ್ಥಿತಿಯಿದೆ.
ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಂಡು ವಿದ್ಯುತ್ ಟ್ರಾನ್ಸ್ ಫಾರ್ಮರ್ಗೆ ಆಧಾರವಾಗಿ ಸದೃಢವಾದ ಹೊಸ ಕಂಬವನ್ನು ಅಳವಡಿಸಬೇಕು. ಅನಂತರ ತುಕ್ಕುಹಿಡಿದು ಬೀಳುವ ಸ್ಥಿತಿಯಲ್ಲಿರುವ ಕಂಬವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಾರ್ವಜನಿಕರ ಪ್ರಾಣ ಹಾನಿ ತಡೆಗಟ್ಟುವುದು ಮತ್ತು ಆಸ್ತಿ ರಕ್ಷಣೆ ಹಿತದೃಷ್ಟಿಯಿಂದ ಫುಟ್ಪಾತ್, ರಸ್ತೆಯ ಮಧ್ಯೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ಗಳನ್ನು ಅಳವಡಿಸಬಾರದು ಎಂಬುದಾಗಿ ಇತ್ತೀಚೆಗೆ ಹೈಕೋರ್ಟ್ ಕೂಡ ಆದೇಶ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…