ಓದುಗರ ಪತ್ರ
ಮೈಸೂರು ನಗರದ ಅಗ್ರಹಾರ ಬಡಾವಣೆಯ ರಾಮಾನುಜ ರಸ್ತೆಯ ೭ನೇ ಮತ್ತು ೮ನೇ ಕ್ರಾಸ್ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ಗೆ ಆಧಾರವಾಗಿ ಅಳವಡಿಸಿರುವ ಕಬ್ಬಿಣದ ಕಂಬವು ಬಹುಪಾಲು ತುಕ್ಕು ಹಿಡಿದು ಉದುರುತ್ತಿದ್ದು, ಭಾರೀ ಅನಾಹುತಕ್ಕೆ ಕಾದುನಿಂತಿದೆ. ಈ ಕಂಬವು ವಿದ್ಯುತ್ ಟ್ರಾನ್ಸ್ ಫಾರ್ಮರ್ನ ಸಂಪೂರ್ಣ ಭಾರವನ್ನು ಹೊತ್ತು ನಿಂತಿದೆ. ಆದರೆ ಕಂಬದ ತಳಭಾಗ ಬಹುಪಾಲು ತುಕ್ಕುಹಿಡಿದು ಉದುರುತ್ತಿರುವುದರಿಂದ ಕುಸಿದು ಬೀಳುವ ಹಂತದಲ್ಲಿದೆ.
ಈಗ ಮಳೆಗಾಲವಾದ್ದರಿಂದ ಕಂಬ ಮತ್ತಷ್ಟು ತುಕ್ಕು ಹಿಡಿದು ದುರ್ಬಲಗೊಳ್ಳುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಕಂಬ ಸಂಪೂರ್ಣ ತುಕ್ಕು ಹಿಡಿದು ದುರ್ಬಲಗೊಂಡು ಕುಸಿದರೆ, ಟ್ರಾನ್ಸ್ ಫಾರ್ಮರ್ ನೆಲಕ್ಕುರುಳಲಿದ್ದು, ಭಾರಿ ಅನಾಹುತ ಸಂಭವಿಸಲಿದೆ ಎಂದು ರಸ್ತೆಯ ಅಕ್ಕಪಕ್ಕದ ಮನೆಗಳವರು ಆತಂಕಗೊಂಡಿದ್ದಾರೆ.ಸಾರ್ವಜನಿಕರು ಈ ರಸ್ತೆಯಲ್ಲಿ ಪ್ರಾಣ ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಾದ ಪರಿಸ್ಥಿತಿಯಿದೆ.
ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಂಡು ವಿದ್ಯುತ್ ಟ್ರಾನ್ಸ್ ಫಾರ್ಮರ್ಗೆ ಆಧಾರವಾಗಿ ಸದೃಢವಾದ ಹೊಸ ಕಂಬವನ್ನು ಅಳವಡಿಸಬೇಕು. ಅನಂತರ ತುಕ್ಕುಹಿಡಿದು ಬೀಳುವ ಸ್ಥಿತಿಯಲ್ಲಿರುವ ಕಂಬವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಾರ್ವಜನಿಕರ ಪ್ರಾಣ ಹಾನಿ ತಡೆಗಟ್ಟುವುದು ಮತ್ತು ಆಸ್ತಿ ರಕ್ಷಣೆ ಹಿತದೃಷ್ಟಿಯಿಂದ ಫುಟ್ಪಾತ್, ರಸ್ತೆಯ ಮಧ್ಯೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ಗಳನ್ನು ಅಳವಡಿಸಬಾರದು ಎಂಬುದಾಗಿ ಇತ್ತೀಚೆಗೆ ಹೈಕೋರ್ಟ್ ಕೂಡ ಆದೇಶ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…