ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಪರಿಸರದಲ್ಲಿ ಪ್ರಕೃತಿಯೊಂದಿಗೆ ಲೀನವಾಗಿದ್ದಾರೆ. ಪಕ್ಕದ ಆಂಧ್ರಪ್ರದೇಶಲ್ಲಿ ಜನಿಸಿದ್ದರೂ,ತಾವು ಇಷ್ಟಪಡುತ್ತಿದ್ದ ಮೈಸೂರಿನಲ್ಲಿ ತಮ್ಮ ಜೀವಿತಾವಧಿಯ ಕೊನೆಯ ದಿನಗಳನ್ನು ಕಳೆದಿದ್ದಾರೆ. ಭಾರತದ ೨೦ ಭಾಷೆಗಳಲ್ಲಿ, ೪೮,೦೦೦ ಹಾಡು ಗಳನ್ನು ಹಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ತಮ್ಮ ಏಳು ದಶಕಗಳ ಸುದೀರ್ಘ ಸಂಗೀತ ಪಯಾಣದಲ್ಲಿ ೪ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, ೩೩ ವಿವಿಧ ರಾಜ್ಯ ಸರ್ಕಾರದ ಪ್ರಶಸ್ತಿಗಳು, ೧೦ ಫಿಲಂ ಫೇರ್ ಪ್ರಶಸ್ತಿ ಪಡೆದ ಏಕೈಕ ಹಿನ್ನೆಲೆ ಗಾಯಕಿ. ಇದನ್ನು ಸರಿಗಟ್ಟಲು ಯಾರಿಂದಲೂ ಸಾಧ್ಯವಿಲ್ಲ. ೨೦೧೩ ರಲ್ಲಿ ತಮಗೆ ಘೋಷಿಸಿದ ಪದ್ಮಭೂಷಣ ಪ್ರಶಸ್ತಿಯನ್ನೇ ನಿರಾಕರಿಸಿದ ದಿಟ್ಟ ಗಾಯಕಿ. ಕನ್ನಡ ಭಾಷೆ ಇರುವ ತನಕವೂ ಎಸ್. ಜನಕಿಯವರ ಹೆಸರು ಅಜರಾಮರವಾಗಿ ಉಳಿಯುತ್ತದೆ.
-ಬೂಕನಕೆರೆ ವಿಜೇಂದ್ರ,ಮೈಸೂರು
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…
ದಾಸೇಗೌಡ ಸರಗೂರು ಅಸಮರ್ಪಕ ವ್ಯವಸ್ಥೆಯಿಂದ ನೀರು ಪೋಲು;ನಿರ್ವಹಣೆಯಿಲ್ಲದ ಶೌಚಾಲಯ, ಕಸದ ರಾಶಿ ತಾಂಡವ ಸರಗೂರು: ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ…