Andolana originals

ಓದುಗರ ಪತ್ರ: ಸರಿಗಮ ವಿಜಿ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟ

ಸರಿಗಮ ವಿಜಿ ಎಂದೇ ಖ್ಯಾತರಾಗಿದ್ದ ಹಾಸ್ಯ ನಟ, ಸಹಾಯಕ ನಿರ್ದೇಶಕ, ರಂಗ ಕರ್ಮಿ , ೭೬ ವರ್ಷ ವಯಸ್ಸಿನ ವಿಜಯಕುಮಾರ್ ರವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಟೈಗರ್ ಪ್ರಭಾಕರ್‌ರವರ ಹಲವು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಸರಿಗಮ ವಿಜಿ ಮತ್ತು ಖ್ಯಾತ ಹಾಸ್ಯ ನಟಿ ಉಮಾಶ್ರೀಯವರ ಜೋಡಿ ಹೆಚ್ಚು ಜನಪ್ರಿಯವಾಗಿತ್ತು. ತಮ್ಮದೇ ಆದ ಶೈಲಿಯಲ್ಲಿ ಡೈಲಾಗ್ ಡೆಲಿವರಿ ಮಾಡುವ ಮೂಲಕ ಪ್ರೇಕ್ಷಕರನ್ನು ನಕ್ಕುನಗಿಸುತ್ತಿದ್ದ ವಿಜಿರವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ವಿಜಿರವರು ಅನೇಕ ಕಷ್ಟ ಕಾರ್ಪಣ್ಯಗಳ ನಡುವೆಯೂ ಕಲೆಯನ್ನು ನಂಬಿ ಬದುಕನ್ನು ಕಟ್ಟಿಕೊಂಡವರು. ಪ್ರತಿಯೊಬ್ಬ ಹಾಸ್ಯನಟರ ಬದುಕಿನ ಹಿಂದೆ ಸಾಕಷ್ಟು ಕಷ್ಟಗಳಿರುತ್ತವೆ. ಕನ್ನಡ ಹಾಸ್ಯ ದಿಗ್ಗಜರಾದ ಬಾಲ ಕೃಷ್ಣ, ನರಸಿಂಹರಾಜು, ರತ್ನಾಕರ, ಮುಸುರಿ ಕೃಷ್ಣಮೂರ್ತಿರವರಂತಹ ಹಲವು ಕಲಾವಿದರು ನೋವಿನ ಬಾಣಲೆಯಲ್ಲೇ ಬೆಂದು ಮೇಲೆದ್ದವರು. ಸಿನಿಮಾದಲ್ಲಿ ಕಡಿಮೆ ಸಂಭಾವನೆ ಪಡೆಯುತ್ತಿದ್ದರೂ ಕಲೆಯನ್ನು ನಂಬಿ ಬದುಕಿದವರು. ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಾದರೂ ಹಿರಿಯ ಕಲಾವಿದರಿಗೆ ಸೂಕ್ತ ನೆರವನ್ನು ಕಲ್ಪಿಸುವುದು ಅಗತ್ಯ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

11 mins ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

20 mins ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

32 mins ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

1 hour ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

2 hours ago

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…

2 hours ago