Andolana originals

ಓದುಗರ ಪತ್ರ: ಸರಿಗಮ ವಿಜಿ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟ

ಸರಿಗಮ ವಿಜಿ ಎಂದೇ ಖ್ಯಾತರಾಗಿದ್ದ ಹಾಸ್ಯ ನಟ, ಸಹಾಯಕ ನಿರ್ದೇಶಕ, ರಂಗ ಕರ್ಮಿ , ೭೬ ವರ್ಷ ವಯಸ್ಸಿನ ವಿಜಯಕುಮಾರ್ ರವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಟೈಗರ್ ಪ್ರಭಾಕರ್‌ರವರ ಹಲವು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಸರಿಗಮ ವಿಜಿ ಮತ್ತು ಖ್ಯಾತ ಹಾಸ್ಯ ನಟಿ ಉಮಾಶ್ರೀಯವರ ಜೋಡಿ ಹೆಚ್ಚು ಜನಪ್ರಿಯವಾಗಿತ್ತು. ತಮ್ಮದೇ ಆದ ಶೈಲಿಯಲ್ಲಿ ಡೈಲಾಗ್ ಡೆಲಿವರಿ ಮಾಡುವ ಮೂಲಕ ಪ್ರೇಕ್ಷಕರನ್ನು ನಕ್ಕುನಗಿಸುತ್ತಿದ್ದ ವಿಜಿರವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ವಿಜಿರವರು ಅನೇಕ ಕಷ್ಟ ಕಾರ್ಪಣ್ಯಗಳ ನಡುವೆಯೂ ಕಲೆಯನ್ನು ನಂಬಿ ಬದುಕನ್ನು ಕಟ್ಟಿಕೊಂಡವರು. ಪ್ರತಿಯೊಬ್ಬ ಹಾಸ್ಯನಟರ ಬದುಕಿನ ಹಿಂದೆ ಸಾಕಷ್ಟು ಕಷ್ಟಗಳಿರುತ್ತವೆ. ಕನ್ನಡ ಹಾಸ್ಯ ದಿಗ್ಗಜರಾದ ಬಾಲ ಕೃಷ್ಣ, ನರಸಿಂಹರಾಜು, ರತ್ನಾಕರ, ಮುಸುರಿ ಕೃಷ್ಣಮೂರ್ತಿರವರಂತಹ ಹಲವು ಕಲಾವಿದರು ನೋವಿನ ಬಾಣಲೆಯಲ್ಲೇ ಬೆಂದು ಮೇಲೆದ್ದವರು. ಸಿನಿಮಾದಲ್ಲಿ ಕಡಿಮೆ ಸಂಭಾವನೆ ಪಡೆಯುತ್ತಿದ್ದರೂ ಕಲೆಯನ್ನು ನಂಬಿ ಬದುಕಿದವರು. ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಾದರೂ ಹಿರಿಯ ಕಲಾವಿದರಿಗೆ ಸೂಕ್ತ ನೆರವನ್ನು ಕಲ್ಪಿಸುವುದು ಅಗತ್ಯ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

12 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

12 hours ago