ಓದುಗರ ಪತ್ರ
ಸರಿಗಮ ವಿಜಿ ಎಂದೇ ಖ್ಯಾತರಾಗಿದ್ದ ಹಾಸ್ಯ ನಟ, ಸಹಾಯಕ ನಿರ್ದೇಶಕ, ರಂಗ ಕರ್ಮಿ , ೭೬ ವರ್ಷ ವಯಸ್ಸಿನ ವಿಜಯಕುಮಾರ್ ರವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಟೈಗರ್ ಪ್ರಭಾಕರ್ರವರ ಹಲವು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಸರಿಗಮ ವಿಜಿ ಮತ್ತು ಖ್ಯಾತ ಹಾಸ್ಯ ನಟಿ ಉಮಾಶ್ರೀಯವರ ಜೋಡಿ ಹೆಚ್ಚು ಜನಪ್ರಿಯವಾಗಿತ್ತು. ತಮ್ಮದೇ ಆದ ಶೈಲಿಯಲ್ಲಿ ಡೈಲಾಗ್ ಡೆಲಿವರಿ ಮಾಡುವ ಮೂಲಕ ಪ್ರೇಕ್ಷಕರನ್ನು ನಕ್ಕುನಗಿಸುತ್ತಿದ್ದ ವಿಜಿರವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ವಿಜಿರವರು ಅನೇಕ ಕಷ್ಟ ಕಾರ್ಪಣ್ಯಗಳ ನಡುವೆಯೂ ಕಲೆಯನ್ನು ನಂಬಿ ಬದುಕನ್ನು ಕಟ್ಟಿಕೊಂಡವರು. ಪ್ರತಿಯೊಬ್ಬ ಹಾಸ್ಯನಟರ ಬದುಕಿನ ಹಿಂದೆ ಸಾಕಷ್ಟು ಕಷ್ಟಗಳಿರುತ್ತವೆ. ಕನ್ನಡ ಹಾಸ್ಯ ದಿಗ್ಗಜರಾದ ಬಾಲ ಕೃಷ್ಣ, ನರಸಿಂಹರಾಜು, ರತ್ನಾಕರ, ಮುಸುರಿ ಕೃಷ್ಣಮೂರ್ತಿರವರಂತಹ ಹಲವು ಕಲಾವಿದರು ನೋವಿನ ಬಾಣಲೆಯಲ್ಲೇ ಬೆಂದು ಮೇಲೆದ್ದವರು. ಸಿನಿಮಾದಲ್ಲಿ ಕಡಿಮೆ ಸಂಭಾವನೆ ಪಡೆಯುತ್ತಿದ್ದರೂ ಕಲೆಯನ್ನು ನಂಬಿ ಬದುಕಿದವರು. ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಾದರೂ ಹಿರಿಯ ಕಲಾವಿದರಿಗೆ ಸೂಕ್ತ ನೆರವನ್ನು ಕಲ್ಪಿಸುವುದು ಅಗತ್ಯ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…