ಓದುಗರ ಪತ್ರ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ ಡಿಎಲ್)(ಮೈಸೂರು ಸ್ಯಾಂಡಲ್ ಸೋಪು) ೨೦೨೪-೨೫ನೇ ಸಾಲಿನಲ್ಲಿ ಗಳಿಸಿದ ೪೫೧ ಕೋಟಿ ರೂ. ಲಾಭದಲ್ಲಿ ಶೇ.೩೦ರಷ್ಟು ಲಾಭಾಂಶದ ಬಾಬ್ತು ೧೩೫ ಕೋಟಿ ರೂ.ಗಳ ಚೆಕ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿರುವುದು ಶ್ಲಾಘನೀಯ.
ವರ್ಷದಿಂದ ವರ್ಷಕ್ಕೆ ಕೆಎಸ್ ಡಿಎಲ್ನ ಲಾಭ ಗಳಿಕೆ ಹೆಚ್ಚುತ್ತಾ ಸಾಗಿರುವುದು ಉತ್ತಮ ಬೆಳವಣಿಗೆ. ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಮೈಸೂರು ಸಿಲ್ಕ್ಸ್ , ಮೈಸೂರು ಸ್ಯಾಂಡಲ್ ಸೋಪು, ಮೈಸೂರು ಲ್ಯಾಂಪ್ಸ್, ಮೈಸೂರು ಪೇಪರ್ ಮಿಲ್ಸ್ನ ಉತ್ಪನ್ನಗಳನ್ನು ಕಡ್ಡಾಯವಾಗಿ ಉಳಿದ ಸರಕಾರಿ ಸಂಸ್ಥೆಗಳು ಖರೀದಿಸಬೇಕು ಎಂದು ಆದೇಶ ಹೊರಡಿಸುವ ಮೂಲಕ ಲಾಭದಾಯಕವಾಗಿಸಲು ನಿಯಮವನ್ನು ರೂಪಿಸಿದ್ದರು. ಸಾರ್ವಜನಿಕ ರಂಗದ ಈ ಉದ್ದಿಮೆಗಳು ಲಾಭದಲ್ಲೇ ಇದ್ದವು. ನಂತರ ಬಂದ ಜನಪ್ರತಿನಿಧಿಗಳ ಸರ್ಕಾರಗಳು ಈ ನಿಯಮವನ್ನು ಗಾಳಿಗೆ ತೂರಿ ಖಾಸಗಿ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಟ್ಟು ಸಾರ್ವಜನಿಕ ರಂಗದ ಉದ್ದಿಮೆಗಳನ್ನು ನಿರ್ಲಕ್ಷಿಸಿದ್ದರಿಂದ ಮೈಸೂರು ಲ್ಯಾಂಪ್ಸ್, ಮೈಸೂರು ಪೇಪರ್ ಮಿಲ್ಸ್ ಮುಚ್ಚಿ ಹೋಗಿವೆ. ಮಹಾರಾಜರ ಮಹಾತ್ವಾಕಾಂಕ್ಷೆಯ ಉದ್ದಿಮೆಗಳಾದ ಮೈಸೂರು ಸ್ಯಾಂಡಲ್ (ಕೆಎಸ್ಡಿಎಲ್), ಮೈಸೂರು ಸಿಲ್ಕ್ಸ್ ಗಳನ್ನು ಸರ್ಕಾರ ಉಳಿಸಲು ಕ್ರಮ ಕೈಗೊಳ್ಳುವುದು ಅಗತ್ಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…