Andolana originals

ಓದುಗರ ಪತ್ರ:  ಶಾಲಾ ಮಕ್ಕಳ ಪ್ರವಾಸ: ಮುನ್ನೆಚ್ಚರಿಕೆ ಅಗತ್ಯ

ಇತ್ತೀಚಿನ ದಿನಗಳಲ್ಲಿ, ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಶೈಕ್ಷಣಿಕ ಅವಧಿಯ ವರ್ಷದಲ್ಲಿ ಒಂದು ದಿನದ ಮಟ್ಟಿಗೆ ಶಾಲಾ ಪ್ರವಾಸ ಕೈಗೊಳ್ಳಲಾಗುತ್ತದೆ. ಕೆಲವು ಶಾಲೆಗಳ ಮುಖ್ಯಸ್ಥರು, ಪ್ರವಾಸ ಹೊರಡುವ ಸಂದರ್ಭದಲ್ಲಿ, ಕನಿಷ್ಠ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳದೇ ಇರುವುದು ಸರಿಯಲ್ಲ. ಶಾಲೆಗಳ ಮುಖ್ಯಸ್ಥರು ಆಯಾ ಶಾಲಾ ವ್ಯಾಪ್ತಿಯ ಬಿಇಓರವರಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು, ಆದರೆ ಈ ನಿಯಮವನ್ನು ಬಹುತೇಕ ಶಾಲೆಗಳಲ್ಲಿ ಪಾಲಿಸುವುದಿಲ್ಲ.  ಸಾಮಾನ್ಯವಾಗಿ ವರ್ಷದ ಕೊನೆಯ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲೇ ಎಲ್ಲಾ ಶಾಲೆಗಳಲ್ಲಿ ಪ್ರವಾಸ ಕೈಗೊಳ್ಳುವುದರಿಂದ ಸಂಚಾರ ದಟ್ಟಣೆಯಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ, ಇದರ ಬದಲಾಗಿ ಆ ಶೈಕ್ಷಣಿಕ ವರ್ಷದ ಯಾವ ತಿಂಗಳಲ್ಲಿ ಬೇಕಾದರೂ ಪ್ರವಾಸ ಕೈಗೊಳ್ಳುವಂತಾಗಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಯಾಣ ದರ ಕಡಿಮೆ ಎನ್ನುವ ಕಾರಣಕ್ಕಾಗಿ ಖಾಸಗಿ ಬಸ್‌ಗಳ ಮೊರೆ ಹೋಗುತ್ತಾರೆ, ಅದರ ಬದಲು ಕಡ್ಡಾಯವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲೇ ಪ್ರವಾಸ ಕೈಗೊಳ್ಳಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬ ನಿಯಮ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯವಾಗಬೇಕು ಹಾಗೂ ಪ್ರವಾಸ ಹೊರಡುವ ಪ್ರತಿ ವಿದ್ಯಾರ್ಥಿ/ವಿದ್ಯಾರ್ಥಿನಿಯ ಮೇಲೆ ವೈಯಕ್ತಿಕವಾಗಿ ಕನಿಷ್ಠ ೧೦ ಲಕ್ಷ ರೂ. ಜೀವ ವಿಮಾ ಪಾಲಿಸಿ ಇರುವಂತೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

13 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

41 mins ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

60 mins ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

1 hour ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

13 hours ago