ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ, ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ಶೈಕ್ಷಣಿಕ ಅವಧಿಯ ವರ್ಷದಲ್ಲಿ ಒಂದು ದಿನದ ಮಟ್ಟಿಗೆ ಶಾಲಾ ಪ್ರವಾಸ ಕೈಗೊಳ್ಳಲಾಗುತ್ತದೆ. ಕೆಲವು ಶಾಲೆಗಳ ಮುಖ್ಯಸ್ಥರು, ಪ್ರವಾಸ ಹೊರಡುವ ಸಂದರ್ಭದಲ್ಲಿ, ಕನಿಷ್ಠ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳದೇ ಇರುವುದು ಸರಿಯಲ್ಲ. ಶಾಲೆಗಳ ಮುಖ್ಯಸ್ಥರು ಆಯಾ ಶಾಲಾ ವ್ಯಾಪ್ತಿಯ ಬಿಇಓರವರಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು, ಆದರೆ ಈ ನಿಯಮವನ್ನು ಬಹುತೇಕ ಶಾಲೆಗಳಲ್ಲಿ ಪಾಲಿಸುವುದಿಲ್ಲ. ಸಾಮಾನ್ಯವಾಗಿ ವರ್ಷದ ಕೊನೆಯ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲೇ ಎಲ್ಲಾ ಶಾಲೆಗಳಲ್ಲಿ ಪ್ರವಾಸ ಕೈಗೊಳ್ಳುವುದರಿಂದ ಸಂಚಾರ ದಟ್ಟಣೆಯಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ, ಇದರ ಬದಲಾಗಿ ಆ ಶೈಕ್ಷಣಿಕ ವರ್ಷದ ಯಾವ ತಿಂಗಳಲ್ಲಿ ಬೇಕಾದರೂ ಪ್ರವಾಸ ಕೈಗೊಳ್ಳುವಂತಾಗಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಯಾಣ ದರ ಕಡಿಮೆ ಎನ್ನುವ ಕಾರಣಕ್ಕಾಗಿ ಖಾಸಗಿ ಬಸ್ಗಳ ಮೊರೆ ಹೋಗುತ್ತಾರೆ, ಅದರ ಬದಲು ಕಡ್ಡಾಯವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲೇ ಪ್ರವಾಸ ಕೈಗೊಳ್ಳಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬ ನಿಯಮ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯವಾಗಬೇಕು ಹಾಗೂ ಪ್ರವಾಸ ಹೊರಡುವ ಪ್ರತಿ ವಿದ್ಯಾರ್ಥಿ/ವಿದ್ಯಾರ್ಥಿನಿಯ ಮೇಲೆ ವೈಯಕ್ತಿಕವಾಗಿ ಕನಿಷ್ಠ ೧೦ ಲಕ್ಷ ರೂ. ಜೀವ ವಿಮಾ ಪಾಲಿಸಿ ಇರುವಂತೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…