Mysore
30
overcast clouds

Social Media

ಭಾನುವಾರ, 26 ಜುಲೈ 2026
Light
Dark

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ಓದುಗರ ಪತ್ರ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ. ಮೂಲದ ಕಸ ಬೇರ್ಪಡಿಸದಿದ್ದರೆ ಈ ಬೃಹತ್ ಘಟಕಗಳು ಯಶಸ್ವಿಯಾಗಲು ಸಾಧ್ಯವೇ ಇಲ್ಲ. ಕೇವಲ ದೊಡ್ಡ ಯಂತ್ರಗಳನ್ನು ಉಪಯೋಗಿಸುವ ಬದಲು ಪ್ರತಿ ವಾರ್ಡ್ ಮಟ್ಟದಲ್ಲಿ ಸಣ್ಣ ಪ್ರಮಾಣದ ಜೈವಿಕ ಅನಿಲ ಘಟಕಗಳನ್ನು ಸ್ಥಾಪಿಸುವುದು ಹೆಚ್ಚು ಪ್ರಾಯೋಗಿಕ. ಕಸ ಸರಿಯಾಗಿ ವಿಂಗಡಿಸದ ನಾಗರಿಕರಿಗೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ದಂಡ ವಿಧಿಸುವ ಬಿಗಿ ನಿಯಮ ತರಬೇಕು. ಜೊತೆಗೆ ಕಸ ಸಾಗಣೆ ವಾಹನಗಳಿಗೆ ಜಿಪಿಎಸ್ ಮತ್ತು ಸ್ಮಾರ್ಟ್ ಸೆನ್ಸರ್ ಗಳನ್ನು ಅಳವಡಿಸಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸುವುದು ಅತ್ಯಗತ್ಯ. ಕಸವನ್ನು ಕೇವಲ ಸುಟ್ಟು ಹಾಕಿ ವಿದ್ಯುತ್ ಉತ್ಪಾದನೆ ಬದಲು ಮರುಬಳಕೆ ಮತ್ತು ವೈeನಿಕ ಪುನರಾವರ್ತನೆಯ ಕ್ರಾಂತಿಕಾರಿ ಮಾದರಿಗಳನ್ನು ಅನುಸರಿಸದಿದ್ದರೆ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತದೆ. ಅಧಿಕಾರಶಾಹಿಗಳು ಎಚ್ಚೆತ್ತುಕೊಂಡು ಜವಾಬ್ದಾರಿಯುತ ಹೆಜ್ಜೆ ಇಡಬೇಕಿದೆ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

Tags:
error: Content is protected !!