ಓದುಗರ ಪತ್ರ
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ. ಮೂಲದ ಕಸ ಬೇರ್ಪಡಿಸದಿದ್ದರೆ ಈ ಬೃಹತ್ ಘಟಕಗಳು ಯಶಸ್ವಿಯಾಗಲು ಸಾಧ್ಯವೇ ಇಲ್ಲ. ಕೇವಲ ದೊಡ್ಡ ಯಂತ್ರಗಳನ್ನು ಉಪಯೋಗಿಸುವ ಬದಲು ಪ್ರತಿ ವಾರ್ಡ್ ಮಟ್ಟದಲ್ಲಿ ಸಣ್ಣ ಪ್ರಮಾಣದ ಜೈವಿಕ ಅನಿಲ ಘಟಕಗಳನ್ನು ಸ್ಥಾಪಿಸುವುದು ಹೆಚ್ಚು ಪ್ರಾಯೋಗಿಕ. ಕಸ ಸರಿಯಾಗಿ ವಿಂಗಡಿಸದ ನಾಗರಿಕರಿಗೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ದಂಡ ವಿಧಿಸುವ ಬಿಗಿ ನಿಯಮ ತರಬೇಕು. ಜೊತೆಗೆ ಕಸ ಸಾಗಣೆ ವಾಹನಗಳಿಗೆ ಜಿಪಿಎಸ್ ಮತ್ತು ಸ್ಮಾರ್ಟ್ ಸೆನ್ಸರ್ ಗಳನ್ನು ಅಳವಡಿಸಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸುವುದು ಅತ್ಯಗತ್ಯ. ಕಸವನ್ನು ಕೇವಲ ಸುಟ್ಟು ಹಾಕಿ ವಿದ್ಯುತ್ ಉತ್ಪಾದನೆ ಬದಲು ಮರುಬಳಕೆ ಮತ್ತು ವೈeನಿಕ ಪುನರಾವರ್ತನೆಯ ಕ್ರಾಂತಿಕಾರಿ ಮಾದರಿಗಳನ್ನು ಅನುಸರಿಸದಿದ್ದರೆ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತದೆ. ಅಧಿಕಾರಶಾಹಿಗಳು ಎಚ್ಚೆತ್ತುಕೊಂಡು ಜವಾಬ್ದಾರಿಯುತ ಹೆಜ್ಜೆ ಇಡಬೇಕಿದೆ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…