ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್ ಕಂಬವನ್ನು ಒಳಗೊಂಡಂತೆ ಚರಂಡಿಯನ್ನು ನಿರ್ಮಿಸಲಾಗಿದೆ. ಚರಂಡಿ ನಿರ್ಮಾಣವಾದ ನಂತರ ಸ್ಲ್ಯಾಬ್ಗಳಿಂದ ಮುಚ್ಚಲಾಗುತ್ತದೆ. ಕಸ ಕಟ್ಟಿಕೊಂಡರೆ ಚರಂಡಿಯನ್ನು ಒಡೆಯುವುದು ಅನಿವಾರ್ಯವಾಗುತ್ತದೆ. ವಿದ್ಯುತ್ ಗ್ರೌಂಡಿಂಗ್ ಆದರೆ ಚರಂಡಿಗೆ ವಿದ್ಯುತ್ ಪ್ರವಹಿಸಿ ಜೀವ ಹಾನಿ ಸಂಭವಿಸುವ ಸಾಧ್ಯತೆ ಇರುತ್ತದೆ. ಮೈಸೂರು ಮಹಾನಗರ ಪಾಲಿಕೆ ಹಾಗೂ ಸೆಸ್ಕ್ ಅಧಿಕಾರಿಗಳು ಚರಂಡಿಯಿಂದ ವಿದ್ಯುತ್ ಕಂಬವನ್ನು ಸ್ಥಳಾಂತರಿಸುವ ಮೂಲಕ ಸಾರ್ವಜನಿಕರ ಹಿತ ಕಾಪಾಡುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು



