Andolana originals

ಓದುಗರ ಪತ್ರ: ರಕ್ತ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿ

ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಅದರಲ್ಲಿಯೂ ಅಪಘಾತವಾದಾಗಲಂತೂ ರಕ್ತ ಬೇಕಾದಲ್ಲಿ ಗಾಯಾಳುಗಳ ಪರದಾಟ ಹೇಳತೀರದು.

ಎಚ್.ಡಿ.ಕೋಟೆ ತಾಲ್ಲೂಕನ್ನು ಆಡಳಿತಾತ್ಮಕ ದೃಷ್ಟಿಯಿಂದ ಸರಗೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕುಗಳಾಗಿ ವಿಭಾಗಿಸಲಾಗಿದೆ. ಆದರೆ, ಈ ಎರಡೂ ತಾಲ್ಲೂಕುಗಳಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳು ಸಿಗದಿರುವ ಜತೆಗೆ ಎಲ್ಲಿಯೂ ರಕ್ತ ಸಂಗ್ರಹಣೆ ಕೇಂದ್ರವಿಲ್ಲದಿರುವ ಪರಿಣಾಮ ಅಪಘಾತದಂತಹ ತುರ್ತು ಸಂದರ್ಭಗಳಲ್ಲಿ ಗಾಯಾಳುಗಳು ಪರದಾಡುವಂತಾಗಿದೆ. ಅಪಘಾತ ಮಾತ್ರವಲ್ಲದೆ, ಗರ್ಭಿಣಿಯರಿಗೆ ಹೆರಿಗೆ ಸಂದರ್ಭದಲ್ಲಿ ರಕ್ತದ ಅವಶ್ಯವಿದ್ದರೆ ಅವರನ್ನು ಮೈಸೂರಿಗೆ ರವಾನಿಸಬೇಕಿದೆ. ತೀರ ಅನಿವಾರ್ಯವಾಗಿ ರಕ್ತ ಬೇಕಾದಾಗ ರಕ್ತ ಸಿಗದೆ ಗಾಯಾಳುಗಳು ಸಾವನ್ನಪ್ಪಿರುವ ಉದಾಹರಣೆಗಳೂ ಇವೆ. ಆದ್ದರಿಂದ ಆರೋಗ್ಯ ಇಲಾಖೆಯು ಈ ಬಗ್ಗೆ ಗಮನಹರಿಸಿ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ರಕ್ತ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಬೇಕಿದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

40 mins ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

3 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

3 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

6 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

7 hours ago