ಓದುಗರ ಪತ್ರ
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಅದರಲ್ಲಿಯೂ ಅಪಘಾತವಾದಾಗಲಂತೂ ರಕ್ತ ಬೇಕಾದಲ್ಲಿ ಗಾಯಾಳುಗಳ ಪರದಾಟ ಹೇಳತೀರದು.
ಎಚ್.ಡಿ.ಕೋಟೆ ತಾಲ್ಲೂಕನ್ನು ಆಡಳಿತಾತ್ಮಕ ದೃಷ್ಟಿಯಿಂದ ಸರಗೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕುಗಳಾಗಿ ವಿಭಾಗಿಸಲಾಗಿದೆ. ಆದರೆ, ಈ ಎರಡೂ ತಾಲ್ಲೂಕುಗಳಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳು ಸಿಗದಿರುವ ಜತೆಗೆ ಎಲ್ಲಿಯೂ ರಕ್ತ ಸಂಗ್ರಹಣೆ ಕೇಂದ್ರವಿಲ್ಲದಿರುವ ಪರಿಣಾಮ ಅಪಘಾತದಂತಹ ತುರ್ತು ಸಂದರ್ಭಗಳಲ್ಲಿ ಗಾಯಾಳುಗಳು ಪರದಾಡುವಂತಾಗಿದೆ. ಅಪಘಾತ ಮಾತ್ರವಲ್ಲದೆ, ಗರ್ಭಿಣಿಯರಿಗೆ ಹೆರಿಗೆ ಸಂದರ್ಭದಲ್ಲಿ ರಕ್ತದ ಅವಶ್ಯವಿದ್ದರೆ ಅವರನ್ನು ಮೈಸೂರಿಗೆ ರವಾನಿಸಬೇಕಿದೆ. ತೀರ ಅನಿವಾರ್ಯವಾಗಿ ರಕ್ತ ಬೇಕಾದಾಗ ರಕ್ತ ಸಿಗದೆ ಗಾಯಾಳುಗಳು ಸಾವನ್ನಪ್ಪಿರುವ ಉದಾಹರಣೆಗಳೂ ಇವೆ. ಆದ್ದರಿಂದ ಆರೋಗ್ಯ ಇಲಾಖೆಯು ಈ ಬಗ್ಗೆ ಗಮನಹರಿಸಿ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ರಕ್ತ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…