Andolana originals

ಓದುಗರ ಪತ್ರ: ಎಸ್‌ಎಸ್‌ಎಲ್‌ಸಿ ಪಾಸಾಗಲು ಶೇ. ೩೩ ಅಂಕ ನಿಗದಿ ಸರಿಯಲ್ಲ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಲು ಶೇ೩೩ ಅಂಕಗಳು ಸಾಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಹೇಳಿಕೆ ವಿದ್ಯಾರ್ಥಿಗಳಲ್ಲಿ ಕಡಿಮೆ ಅಂಕ ಪಡೆದು ಪಾಸ್ ಆಗಬಹುದು ಎಂಬ ಮನೋಭಾವ ಬರುವಂತೆ ಪ್ರೇರೇಪಿಸುತ್ತದೆ. ನಿರಂತರ ಅಧ್ಯಯನಕ್ಕೆ ಮತ್ತು ಮಕ್ಕಳು ಓದಿನಲ್ಲಿ ತೊಡಗಿಸಿಕೊಳ್ಳುವುದಕ್ಕೆ ಉದಾಸೀನತೆ ಉಂಟಾಗಲು ಕಾರಣವಾಗುತ್ತದೆ.

ಹಾಗಾಗಿ ಇಂತಹ ನಿರ್ಧಾರಗಳನ್ನು ಮಕ್ಕಳ ಮಾನಸಿಕ ವಿಕಸನದ ದೃಷ್ಟಿಯಿಂದ ಮರುಪರಿಶೀಲಿಸಬೇಕು. ಅನುದಾನಿತ ಶಾಲೆಗಳಲ್ಲಿ ಒಂದರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಅಥವಾ ಎರಡು ತರಗತಿಗಳು ಮೌಲ್ಯಯುತ ಶಿಕ್ಷಣವನ್ನು ನೀಡಲಾಗುವುದು ಎಂದು ಸಚಿವರು ಹೇಳಿರುವುದು ಸ್ವಾಗತಾರ್ಹ. ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಹೆಚ್ಚಾಗಲಿ. ಆದರೆ ಶೇ.೩೩ಅಂಕಕ್ಕೇ ಮುಂದಿನ ತರಗತಿಗೆ ತೇರ್ಗಡೆ ಮಾಡುವುದು ಸರಿಯಾದ ಕ್ರಮವಲ್ಲ

-ಪಿ.ಸಿ. ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

52 mins ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

1 hour ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

1 hour ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

2 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

3 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

3 hours ago