Andolana originals

ಓದುಗರ ಪತ್ರ: ಸಜ್ಜನ ರಾಜಕಾರಣಿಯಾಗಿದ್ದ ಶಾಮನೂರು ಶಿವಶಂಕರಪ್ಪ

ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ.

ದೇಶದ ಅತಿ ಹಿರಿಯ ಶಾಸಕರಾಗಿದ್ದ ಶಿವಶಂಕರಪ್ಪನವರು ತಮ್ಮ ೯೫ ವರ್ಷಗಳ ಸುದೀರ್ಘ ಬದುಕಿನಲ್ಲಿ ೬ ಬಾರಿ ಶಾಸಕರಾಗಿ ಹಾಗೂ ಒಂದುಅ ಬಾರಿ ಲೋಕಸಭೆಯ ಸದಸ್ಯರಾಗಿ ರಾಜ್ಯ ಹಾಗೂ ದೇಶದ ರಾಜಕೀಯ ಚರಿತ್ರೆಯಲ್ಲಿ ಅಳಿಸಲಾಗದ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. ಓರ್ವ ದಿಟ್ಟ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಶಿವಶಂಕರಪ್ಪನವರು ಯಾವುದೇ ಕಾರಣಕ್ಕೂ ತಮ್ಮ ಧ್ಯೇಯ ಮತ್ತು ಸಿದ್ಧ್ದಾಂತಗಳ ಜೊತೆ ರಾಜಿ ಮಾಡಿಕೊಳ್ಳುತ್ತಿರಲಿಲ್ಲ. ಎಲ್ಲಾ ರಾಜಕೀಯ ಪಕ್ಷಗಳ ನಾಯಕರ ಜೊತೆ ಸೌಹಾರ್ದ ಸಂಬಂಧ ಹೊಂದಿದ್ದ ಅವರನ್ನು ರಾಜಕೀಯ ವಲಯದಲ್ಲಿ ‘ಅಜಾತ ಶತ್ರು’ ಎಂದೇ ಕರೆಯಲಾಗುತ್ತಿತ್ತು. ಜವಳಿ ಗಿರಣಿಗಳ ನಾಡಾಗಿದ್ದ ದಾವಣಗೆರೆಯನ್ನು ಬಾಪೂಜಿ ಶಿಕ್ಷಣ ಸಂಸ್ಥೆಯ ಮೂಲಕ ಶಿಕ್ಷಣ ಕಾಶಿಯನ್ನಾಗಿ ರೂಪಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.

ಕಾಂಗ್ರೆಸ್ ಪಕ್ಷದ ಓರ್ವ ನಿಷ್ಠಾವಂತ ನಾಯಕನಾಗಿ ದಾವಣಗೆರೆ ಜಿಲ್ಲೆಯಲ್ಲಿ ಮಾತ್ರವಲ್ಲದೇ ಇಡೀ ರಾಜ್ಯದಲ್ಲೇ ಗಮನ ಸೆಳೆದಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ನೇರ ನಡೆ, ನುಡಿ ಕೆಲವರಿಗೆ ಅಪಥ್ಯವೆನ್ನಿಸಿದ್ದರೂ ಅದಕ್ಕಾಗಿ ತಲೆ ಕೆಡಿಸಿಕೊಂಡವರಲ್ಲ. ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಸರಳ ಮತ್ತು ಸಜ್ಜನ ರಾಜಕಾರಣಿಯಾಗಿ ಇಡೀ ದೇಶಕ್ಕೆ ಮಾದರಿಯಾಗಿದ್ದರು.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

18 mins ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

40 mins ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

1 hour ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

2 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

3 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

3 hours ago