Andolana originals

ಅಂಗಡಿ ಬೀದಿ ಸ್ವಚ್ಛಗೊಳಿಸಿದ ಗ್ರಾಪಂ

‘ಆಂದೋಲನ’ ದಿನಪತ್ರಿಕೆಯ ಬುಧವಾರದ ಸಂಚಿಯ ಓದುಗರ ಪತ್ರ ವಿಭಾಗದಲ್ಲಿ ಅಂತರಸಂತೆಯಲ್ಲಿ ಸ್ವಚ್ಛತೆ ಕಾಪಾಡಿ’ ಎಂಬ ಶೀರ್ಷಿಕೆಯಡಿ ನನ್ನದೊಂದು ಪತ್ರ ಪ್ರಕಟಗೊಂಡಿತ್ತು.

ಅಂತರಸಂತೆಯ ಅಂಗಡಿಬೀದಿ ಪ್ರಮುಖ ಜನನಿಬಿಡ ಪ್ರದೇಶವಾಗಿದ್ದು, ಇಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ದುರ್ವಾಸನೆ ಬೀರುವ ಜತೆಗೆ ಸೊಳ್ಳೆಗಳ ಹಾವಳಿಯೂ ಹೆಚ್ಚಾಗಿ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿತ್ತು. ಇದು ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಾಗಿದ್ದು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಹಾಗೂ ಕೇರಳಕ್ಕೆ ಸಂಚರಿಸುವ ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿತ್ತು.

ಈ ಸಂಬಂಧ ನಾನು ಬರೆದ ಓದುಗರ ಪತ್ರವೊಂದು ʼಆಂದೋಲನʼ ಪತ್ರಿಕೆಯಲ್ಲಿ ಪ್ರಕಟಗೊಂಡ ಬಳಿಕ ಅಂತರಸಂತೆ ಗ್ರಾಮ ಪಂಚಾಯಿತಿಯವರು ಎಚ್ಚೆತ್ತುಕೊಂಡು ಅಂಗಡಿಬೀದಿಯನ್ನು ಸ್ವಚ್ಛಗೊಳಿಸಿದ್ದಾರೆ. ಸಾರ್ವಜನಿಕ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ‘ಆಂದೋಲನ’ ದಿನಪತ್ರಿಕೆಗೆ ಧನ್ಯವಾದಗಳು.

-ಎಸ್.ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

10 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 hours ago