ಓದುಗರ ಪತ್ರ
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್ ವಾಟರ್ ಬಾಟಲ್ಗಳು ದೊರೆಯುವುದಿಲ್ಲ. ಈ ಬಗ್ಗೆ ರೈಲು ಗಾಡಿಗಳಲ್ಲಿ ನೀರಿನ ಬಾಟಲಿ ಮಾರಾಟ ಮಾಡುವವರನ್ನು ಕೇಳಿದರೆ ಅರ್ಧ ಲೀ. ನೀರಿನ ಬಾಟಲಿ ದೊರೆಯುವುದಿಲ್ಲ ಎನ್ನುತ್ತಾರೆ. ಈ ಚಳಿಗಾಲದಲ್ಲಿ ಒಂದು ಗುಟುಕು ನೀರು ಕುಡಿಯಲು ಕೂಡ ಅನಿವಾರ್ಯವಾಗಿ ಒಂದು ಲೀಟರ್ ನೀರನ್ನು ತೆಗೆದುಕೊಂಡು ಉಳಿದುದನ್ನು ಆಚೆಗೆ ಚೆಲ್ಲಬೇಕು. ಇದು ಒಂದು ರೀತಿಯಲ್ಲಿ ಅನವಶ್ಯಕವಾಗಿ ನೀರನ್ನು ಪೋಲುಮಾಡಿದಂತೆ, ರೈಲ್ವೇ ಬೋಗಿಗಳ ಒಳಗೆ ‘ನೀರು ಅತ್ಯಮೂಲ್ಯ ವಸ್ತು, ಅದನ್ನು ಪೋಲು ಮಾಡದಿರಿ’ ಎಂದು ಬರೆದಿರುವುದನ್ನು ನೋಡಿದಾಗ ಈ ಘೋಷವಾಕ್ಯಕ್ಕೆ ಅಪಮಾನ ಮಾಡಿದಂತೆ ಎನಿಸಿತು, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಅರ್ಧ ಲೀಟರ್ ನೀರು ಕುಡಿಯುವ ಬಾಟಲಿಗಳ ವ್ಯವಸ್ಥೆಯನ್ನು ಕಲ್ಪಿಸುವುದು ಅಗತ್ಯ.
-ಬೂಕನಕೆರೆ ವಿಜಯೇಂದ್ರ, ಮೈಸೂರು
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…