ಓದುಗರ ಪತ್ರ
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್ ವಾಟರ್ ಬಾಟಲ್ಗಳು ದೊರೆಯುವುದಿಲ್ಲ. ಈ ಬಗ್ಗೆ ರೈಲು ಗಾಡಿಗಳಲ್ಲಿ ನೀರಿನ ಬಾಟಲಿ ಮಾರಾಟ ಮಾಡುವವರನ್ನು ಕೇಳಿದರೆ ಅರ್ಧ ಲೀ. ನೀರಿನ ಬಾಟಲಿ ದೊರೆಯುವುದಿಲ್ಲ ಎನ್ನುತ್ತಾರೆ. ಈ ಚಳಿಗಾಲದಲ್ಲಿ ಒಂದು ಗುಟುಕು ನೀರು ಕುಡಿಯಲು ಕೂಡ ಅನಿವಾರ್ಯವಾಗಿ ಒಂದು ಲೀಟರ್ ನೀರನ್ನು ತೆಗೆದುಕೊಂಡು ಉಳಿದುದನ್ನು ಆಚೆಗೆ ಚೆಲ್ಲಬೇಕು. ಇದು ಒಂದು ರೀತಿಯಲ್ಲಿ ಅನವಶ್ಯಕವಾಗಿ ನೀರನ್ನು ಪೋಲುಮಾಡಿದಂತೆ, ರೈಲ್ವೇ ಬೋಗಿಗಳ ಒಳಗೆ ‘ನೀರು ಅತ್ಯಮೂಲ್ಯ ವಸ್ತು, ಅದನ್ನು ಪೋಲು ಮಾಡದಿರಿ’ ಎಂದು ಬರೆದಿರುವುದನ್ನು ನೋಡಿದಾಗ ಈ ಘೋಷವಾಕ್ಯಕ್ಕೆ ಅಪಮಾನ ಮಾಡಿದಂತೆ ಎನಿಸಿತು, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಅರ್ಧ ಲೀಟರ್ ನೀರು ಕುಡಿಯುವ ಬಾಟಲಿಗಳ ವ್ಯವಸ್ಥೆಯನ್ನು ಕಲ್ಪಿಸುವುದು ಅಗತ್ಯ.
-ಬೂಕನಕೆರೆ ವಿಜಯೇಂದ್ರ, ಮೈಸೂರು
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…