ಓದುಗರ ಪತ್ರ
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ. ಸಾರಿಗೆ ಇಲಾಖೆಗೆ ಎಂಟರಿಂದ ಒಂಬತ್ತು ಕೋಟಿ ರೂ. ನಷ್ಟವಾಗುತ್ತಿರುವುದರಿಂದ ಸದ್ಯದಲ್ಲಿಯೇ ಸಾರಿಗೆ ದರ ಪರಿಷ್ಕರಣೆಯಾಗಲಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿರುವುದು ಜನ ಸಾಮಾನ್ಯರು ಅದರಲ್ಲೂ ಪುರುಷರು ಒಲ್ಲದ ಮನಸ್ಸಿನಿಂದ ಒಪ್ಪಿಕೊಳ್ಳಬೇಕಾದ ಸ್ಥಿತಿ ಇದೆ. ಹೆಂಗಸರಿಗೆ ಉಚಿತ ಎನ್ನುವ ಸರ್ಕಾರ ಇಬ್ಬರ ದರವನ್ನೂ ಒಬ್ಬರಿಂದಲೇ(ಪಾಪ ಪುರುಷರಿಂದ) ಕಸಿಯುವ ಯತ್ನವಲ್ಲವೇ ಇದು. ನೀವು ಬಡ ಮಹಿಳೆಯರಿಗೆ ಉಚಿತ ಸಾರಿಗೆ ಒದಗಿಸಲೇ ಬೇಕು ಎನ್ನುವಂತವರಾದರೆ ಸಂಬಂಧಿಸಿದ ಜಿಯೊಳಗೆ ಮಾತ್ರ ಅವಕಾಶ ಮಾಡಿ ಕೊಡಿ. ಅದು ಬಿಟ್ಟು ರಾಜ್ಯಾದ್ಯಂತ ಉಚಿತವಾಗಿ ಸಂಚರಿಸಲಿ ಎಂದು ಹೇಳಿ ‘ಅಭಾಗ್ಯವಂತರಿಂದ’ ಹೆಚ್ಚಿನ ಟಿಕೆಟ್ ದರ ವಸೂಲಿಗೆ ಮುಂದಾಗುತ್ತಿರುವುದು ನ್ಯಾಯವೇ ಎಂದು ಕೇಳಿದರೆ ಅದು ಸಾರಿಗೆ ಸಚಿವರ ಕಿವಿಮುಟ್ಟುವುದಿಲ್ಲ ಎಂಬ ಸತ್ಯ ಗೊತ್ತಿದ್ದರೂ ಗೊಣಗುತ್ತಲೇ ಹೇಳಬೇಕಿದೆ. ಡೀಸೆಲ್ ದರ ಹಾಗೂ ನಿರ್ವಹಣೆ ವೆಚ್ಚ ಹೆಚ್ಚಳದಿಂದ ಅನಿವಾರ್ಯವಾಗಿ ಟಿಕೆಟ್ ದರ ಹೆಚ್ಚಿಸಬೇಕಾಗಿದೆ ಎಂಬ ಗೊತ್ತುಪಡಿಸಿದ ಹೇಳಿಕೆ ಕೇಳಿಕೊಂಡು ಪ್ರಯಾಣ ಮಾಡಲೇಬೇಕಾದ ಅನಿವಾರ್ಯತೆ ಇದ್ದೇ ಇದೆ. ಸರ್ಕಾರಿ ಉದ್ಯೋಗಿಗಳಿಗೆ ವರುಷಕ್ಕೆ ಎರಡು ಬಾರಿ ತುಟ್ಟಿಭತ್ಯ ಪರಿಷ್ಕರಣೆಯಾಗುತ್ತದೆ. ಆದರೆ ಖಾಸಗಿ ವಲಯ ಮತ್ತು ದಿನಗೂಲಿ ಆಧಾರದಲ್ಲಿ ದುಡಿದು ತಿನ್ನುವ ಮಂದಿ ತಾನೆ ಕಷ್ಟಗಳ ಸರಮಾಲೆಗೆ ಕೊರಳು ಕೊಡಬೇಕಾಗಿರುವುದು.
-ವಿಜಯ್ ಹೆಮ್ಮಿಗೆ, ಮೈಸೂರು
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…
ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…