ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ ಯಾವುದೇ ಮುನ್ಸೂಚನೆ ಇಲ್ಲದೇ ಕೆಎಂಎಫ್ ಹೆಚ್ಚು ಮಾಡಿದೆ. ಇದು ಮಧ್ಯಮ ವರ್ಗದ ಗ್ರಾಹಕರ ಮೇಲೆ ಹೇರಿದ ಹೆಚ್ಚಿನ ಹೊರೆ.ಬಹುತೇಕ ಮಧ್ಯಮ ವರ್ಗದ ಜನರು ನಂದಿನಿ ಉತ್ಪನ್ನಗಳನ್ನೇ ಬಳಸುತ್ತಾರೆ. ಈಗ ಬೆಲೆ ಏರಿಕೆಯಿಂದ ಈ ವರ್ಗದ ಜನರು ತುಪ್ಪ ತಿನ್ನುವ ಬಗ್ಗೆ ಸ್ವಲ್ಪ ಯೋಚಿಸಬೇಕಾಗುತ್ತದೆ. ತುಪ್ಪ ತಿನ್ನುವ ಅನಿವಾರ್ಯತೆ ಇದ್ದರೆ ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವಂತಹ ನಾಣ್ಣುಡಿ ಈಗ ಹೆಚ್ಚು ಪ್ರಸ್ತುತವಾಗುತ್ತಿದೆ ಎಂದು ಅನಿಸುತ್ತದೆ. ಗಮನಿಸಬೇಕಾದ ಸಂಗತಿ ಎಂದರೆ, ಕಳೆದ ನವೆಂಬರ್ ತಿಂಗಳಲ್ಲಿ ಕೆಎಂಎಫ್ ತುಪ್ಪ ಮತ್ತು ಬೆಣ್ಣೆ ಉತ್ಪನ್ನಗಳ ಬೆಲೆಯನ್ನು ಶೇ. ೬ ರಷ್ಟು ಏರಿಕೆ ಮಾಡಿತ್ತು. ಅಂದರೆ ಕಳೆದ ಆರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಈ ಎರಡು ನಂದಿನಿ ಉತ್ಪನ್ನಗಳನ ಬೆಲೆಯನ್ನು ಏರಿಕೆ ಮಾಡಿದೆ. ಜನ ಸಾಮಾನ್ಯರ ಬಗ್ಗೆ ತೀವ್ರ ಕಾಳಜಿ ವಹಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತುಪ್ಪದ ವಿಷಯಕ್ಕಿಂತ ಬೇರೆ ವಿಷಯಗಳ ಬಗ್ಗೆ ತಲೆಕೆಡಿಸಿಕೊಂಡಂತೆ ಇದೆ!
-ಬೂಕನಕೆರೆ ವಿಜೇಂದ್ರ , ಮೈಸೂರು
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…
ಪ್ರಶಾಂತ್ ಎನ್ ಮೈಸೂರು: ಸುಗಮ ಸಂಚಾರ ಹಾಗೂ ಜನರ ಸುರಕ್ಷತೆಗಾಗಿ ನಗರದ ವಿವಿಧ ರಸ್ತೆ, ವೃತ್ತಗಳಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್…