ಓದುಗರ ಪತ್ರ
ಎರಡು ಬಾರಿ ಪ್ರಧಾನಿಯಾಗಿ, ಆರ್ಥಿಕ ತಜ್ಞರಾಗಿ ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗರ ನಿಧನ ದೇಶಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ.
ದೇಶಕ್ಕೆ ಮನಮೋಹನ್ ಸಿಂಗರ ಕೊಡುಗೆ ಅಪಾರ. ಆರ್ಥಿಕ ಸಲಹೆಗಾರರಾಗಿ, ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕರಾಗಿ, ಗವರ್ನರ್ ಆಗಿ, ಭಾರತದ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ಭಾರತದ ಹಣಕಾಸು ಸಚಿವರಾಗಿ, ಎರಡು ಬಾರಿ ಪ್ರಧಾನ ಮಂತ್ರಿಗಳಾಗಿ ಹಾಗೂ ರಾಜ್ಯಸಭಾ ಸದಸ್ಯರಾಗುವ ಜತೆಗೆ ಅನೇಕ ಹುದ್ದೆಗಳನ್ನು ಅಲಂಕರಿಸಿ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ್ದರು.
೨೦೦೪ರಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿಯವರು ಮನಮೋಹನ್ ಸಿಂಗ್ರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದರು. ಮೊದಲ ಬಾರಿಗೆ ಉತ್ತಮ ಆಡಳಿತ ನೀಡಿದ ಮನಮೋಹನ್ ಸಿಂಗ್ ೨೦೦೯-೨೦೧೪ರ ಅವಧಿಗೆ ಎರಡನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದರು.
ತಮ್ಮ ಅಪಾರ ಜ್ಞಾನ ಹಾಗೂ ದೂರದೃಷ್ಟಿಯಿಂದ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸಿದ ಮನಮೋಹನ್ ಸಿಂಗ್ ಅವರು, ಸ್ವತಃ ಅರ್ಥಶಾಸ್ತ್ರಜ್ಞರು ಹಾಗೂ ರಾಜನೀತಿಜ್ಞರಾಗಿದ್ದರಿಂದ ಭಾರತ ಆರ್ಥಿಕ ಸಂಕಷ್ಟ ಎದುರಿಸಿದಾಗೆಲ್ಲ ದೇಶವನ್ನು ತಮ್ಮ ಬುದ್ಧಿವಂತಿಕೆಯಿಂದ ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇಂತಹ ಪ್ರಬುದ್ಧ ರಾಜಕಾರಣಿಯನ್ನು ಕಳೆದುಕೊಂಡಿದ್ದು ಭಾರತಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.
-ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…