ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ ಬಗ್ಗೆ ಈಗಾಗಲೇ ಪ್ರಕಟವಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳು ಮತ್ತು ತಕರಾರುಗಳನ್ನು ಸಾರ್ವಜನಿಕರು ಎತ್ತಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತರು ಕೂಡ ನಿವಾಸಿಗಳಿರುವ ಸ್ಥಳಕ್ಕೆ ಹೋಗಿ ಮಾಹಿತಿ ಸಂಗ್ರಹಿಸಲು ತಿಳಿಸಿದ್ದಾರೆ. ಆದರೆ ನಾವು ವಾಸಿಸುವ ಬಡಾವಣೆಗೆ ಬಿಎಲಒಗಳು ಬಂದು ಅಗತ್ಯ ಫಾರಂಗಳನ್ನು ನೀಡಿ, ಅವುಗಳನ್ನು ಭರ್ತಿ ಮಾಡುವ ಬಗ್ಗೆ ತಿಳಿವಳಿಕೆ ನೀಡಿ ಅವುಗಳನ್ನು ಭರ್ತಿ ಮಾಡಿದ ನಂತರ ನಾವೇ ಬರುತ್ತೇವೆ ಅಥವಾ ನಾವಿರುವ ಶಾಲೆಗೆ ಬಂದೂ ನೀಡಬಹುದು ಎಂದು ತಿಳಿಸಿ ಹೋಗಿರುತ್ತಾರೆ.
ಆದರೆ ದಿನಾಂಕ ೪.೭.೨೦೨೬ ರಂದು ನಮ್ಮ ಮನೆಯ ಮತದಾರರ ವಿವರಗಳ -ರಂ ಅನ್ನು ತುಂಬಿಸಿ ನಾನು ನಗರದ ಹೆಬ್ಬಾಳಿನಲ್ಲಿನ ಅವರಿದ್ದ ಶಾಲೆಗೆ ಹೋದಾಗ, ಅಲ್ಲಿ ಕಂಡು ಬಂದದ್ದು, ಶಾಲೆಯ ಆಡಳಿತ ವರ್ಗ ಅವರನ್ನು ಕೆಲಸಕ್ಕೆ ಅನುವು ಮಾಡದೇ ಇರುವುದು. ಅದಾಗಲೇ ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳು ಅಲ್ಲಿಗೆ ಬಂದಿದ್ದು ಮತ್ತು ಅವರಿಗೆ ಕನಿಷ್ಟ ಸೌಜನ್ಯವನ್ನೂ ತೋರದೆ ಅವರು ರಸ್ತೆಯಲ್ಲಿಯೇ ನಿಂತಿದ್ದನ್ನು ನೋಡಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳೇ ಹೀಗೆ ಸರ್ಕಾರಿ ಕೆಲಸಕ್ಕೆ ನಿಯೋಜನೆಯಾಗುವ ಶಿಕ್ಷಕರಿಗೆ ಕೆಲಸಕ್ಕೆ ಅನುವು ಮಾಡದಿರುವ ಬಗ್ಗೆ ಗೊಂದಲ ಮೂಡುತ್ತಿದೆ. ಇಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳು ಸರ್ಕಾರದ ಕೆಲಸಗಳಿಗೆ ಕೈ ಜೋಡಿಸುವ ಬದಲು, ತಮ್ಮ ಸಿಬ್ಬಂದಿ ಶಿಕ್ಷಕರನ್ನು ನಿಯೋಜಿಸದೆ, ಇಲಾಖೆಯ ಕೆಂಗಣ್ಣಿಗೆ ಗುರಿಯಾಗುವಂತೆ ನಡೆದುಕೊಳ್ಳುವ ವರ್ತನೆ ಸಲ್ಲ.
ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಂಬಂಽಸಿದ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಎಚ್ಚರಿಕೆ ನೀಡಿ, ನಿಯೋಜಿಸುವ ಶಿಕ್ಷಕ ವೃಂದಕ್ಕೆ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡುವಂತೆ ತಿಳಿಸುವುದು ಅವಶ್ಯ.
– ವಿಜಯ್ ಹೆಮ್ಮಿಗೆ, ಮೈಸೂರು
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…
ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…
ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…
ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…