Andolana originals

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ ಬಗ್ಗೆ ಈಗಾಗಲೇ ಪ್ರಕಟವಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳು ಮತ್ತು ತಕರಾರುಗಳನ್ನು ಸಾರ್ವಜನಿಕರು ಎತ್ತಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತರು ಕೂಡ ನಿವಾಸಿಗಳಿರುವ ಸ್ಥಳಕ್ಕೆ ಹೋಗಿ ಮಾಹಿತಿ ಸಂಗ್ರಹಿಸಲು ತಿಳಿಸಿದ್ದಾರೆ. ಆದರೆ ನಾವು ವಾಸಿಸುವ ಬಡಾವಣೆಗೆ ಬಿಎಲಒಗಳು ಬಂದು ಅಗತ್ಯ ಫಾರಂಗಳನ್ನು ನೀಡಿ, ಅವುಗಳನ್ನು ಭರ್ತಿ ಮಾಡುವ ಬಗ್ಗೆ ತಿಳಿವಳಿಕೆ ನೀಡಿ ಅವುಗಳನ್ನು ಭರ್ತಿ ಮಾಡಿದ ನಂತರ ನಾವೇ ಬರುತ್ತೇವೆ ಅಥವಾ ನಾವಿರುವ ಶಾಲೆಗೆ ಬಂದೂ ನೀಡಬಹುದು ಎಂದು ತಿಳಿಸಿ ಹೋಗಿರುತ್ತಾರೆ.

ಆದರೆ ದಿನಾಂಕ ೪.೭.೨೦೨೬ ರಂದು ನಮ್ಮ ಮನೆಯ ಮತದಾರರ ವಿವರಗಳ -ರಂ ಅನ್ನು ತುಂಬಿಸಿ ನಾನು ನಗರದ ಹೆಬ್ಬಾಳಿನಲ್ಲಿನ ಅವರಿದ್ದ ಶಾಲೆಗೆ ಹೋದಾಗ, ಅಲ್ಲಿ ಕಂಡು ಬಂದದ್ದು, ಶಾಲೆಯ ಆಡಳಿತ ವರ್ಗ ಅವರನ್ನು ಕೆಲಸಕ್ಕೆ ಅನುವು ಮಾಡದೇ ಇರುವುದು. ಅದಾಗಲೇ ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳು ಅಲ್ಲಿಗೆ ಬಂದಿದ್ದು ಮತ್ತು ಅವರಿಗೆ ಕನಿಷ್ಟ ಸೌಜನ್ಯವನ್ನೂ ತೋರದೆ ಅವರು ರಸ್ತೆಯಲ್ಲಿಯೇ ನಿಂತಿದ್ದನ್ನು ನೋಡಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳೇ ಹೀಗೆ ಸರ್ಕಾರಿ ಕೆಲಸಕ್ಕೆ ನಿಯೋಜನೆಯಾಗುವ ಶಿಕ್ಷಕರಿಗೆ ಕೆಲಸಕ್ಕೆ ಅನುವು ಮಾಡದಿರುವ ಬಗ್ಗೆ ಗೊಂದಲ ಮೂಡುತ್ತಿದೆ. ಇಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳು ಸರ್ಕಾರದ ಕೆಲಸಗಳಿಗೆ ಕೈ ಜೋಡಿಸುವ ಬದಲು, ತಮ್ಮ ಸಿಬ್ಬಂದಿ ಶಿಕ್ಷಕರನ್ನು ನಿಯೋಜಿಸದೆ, ಇಲಾಖೆಯ ಕೆಂಗಣ್ಣಿಗೆ ಗುರಿಯಾಗುವಂತೆ ನಡೆದುಕೊಳ್ಳುವ ವರ್ತನೆ ಸಲ್ಲ.

ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಂಬಂಽಸಿದ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಎಚ್ಚರಿಕೆ ನೀಡಿ, ನಿಯೋಜಿಸುವ ಶಿಕ್ಷಕ ವೃಂದಕ್ಕೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡುವಂತೆ ತಿಳಿಸುವುದು ಅವಶ್ಯ.

– ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

2 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

4 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

5 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

8 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

9 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

12 hours ago