ಓದುಗರ ಪತ್ರ
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು ಚುನಾವಣಾ ಆಯೋಗದ ಪರವಾಗಿ ಆಗಮಿಸುವ ಬೂತ್ ಲೆವೆಲ್ ಆಫೀಸರ್ಸ್ (ಬಿಎಲ್ಒ)ಗಳಿಗೆ ಒದಗಿಸಬೇಕು ಎಂದು ಸಂಪೂರ್ಣ ಮಾಹಿತಿ ಇಲ್ಲ.
ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಹಾಗೂ ಇನ್ನಿತರೆ ಉದ್ಯೋಗದಲ್ಲಿರುವವರು ಬೇರೆ ಬೇರೆ ಊರು ಗಳಿಗೆ ವರ್ಗಾವಣೆಯಾಗುತ್ತಿರುತ್ತಾರೆ. ಪ್ರಸ್ತುತ ಒಂದು ಊರಿನ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿದ್ದವರಿಗೆ ೨೦೦೨ರ ಮತದಾರರ ಪಟ್ಟಿಯಲ್ಲಿ ಯಾವ ಊರಿನ ಯಾವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇತ್ತು, ಯಾವ ಮತದಾನ ಕೇಂದ್ರದಲ್ಲಿ ಮತ ಹಾಕಿದ್ದಿರಿ ಎಂಬ ವಿವರ ನೀಡಿ ಎಂದರೆ ಅದು ಕೆಲವರಿಗೆ ಸಾಧ್ಯವಾಗುವುದಿಲ್ಲ. ಕೇಳಿದ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಜಿ -ರಂಗಳಲ್ಲಿ ದಾಖಲಿಸದಿದ್ದರೆ ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟುಹೋಗಬಹುದು ಎಂಬ ಆತಂಕವೂ ಇದೆ.
ಆದ್ದರಿಂದ ಚುನಾವಣಾ ಆಯೋಗದವರು ದಿನಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳ ಮೂಲಕ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಪ್ರಕ್ರಿಯೆಗೆ ಯಾವ ರೀತಿಯ ದಾಖಲೆಗಳನ್ನು ಒದಗಿಸಬೇಕು ಎಂಬುದರ ಬಗ್ಗೆ ಜಾಹೀರಾತಿನ ಮೂಲಕ ತಿಳಿಸಿದರೆ ಎಸ್ಐಆರ್ ಪ್ರಕ್ರಿಯೆ ಸುಗಮವಾಗಿ ನಡೆಯಲು ಸಹಕಾರಿಯಾಗುತ್ತದೆ. ಸಂಬಂಧಪಟ್ಟವರು ಕೂಡಲೇ ಎಸ್ಐಆರ್ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳಬೇಕು.
-ಎ.ಎಸ್.ಗೋಪಾಲಕೃಷ್ಣ , ರಾಮಕೃಷ್ಣನಗರ, ಮೈಸೂರು
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…
ರೂಪ ಹಾಸನ ನೇಪಥ್ಯಕ್ಕೆ ಸರಿದ ಅಂತಾರಾಷ್ಟ್ರಿಯ ಖ್ಯಾತಿಯ ಅದ್ಭುತ ಕಲಾವಿದ ಮೂರು ದಶಕಗಳ ಹಿಂದೆ ಮದುವೆಯಾಗಿ ಹಾಸನಕ್ಕೆ ಬಂದ ಹೊಸತು.…