Andolana originals

ಓದುಗರ ಪತ್ರ: ಹಾಸನಾಂಬೆ ದರ್ಶನಕ್ಕೆ ಸುಗಮ ವ್ಯವಸ್ಥೆ ಶ್ಲಾಘನೀಯ

ವರ್ಷಕ್ಕೊಮ್ಮೆ ಕೆಲವು ದಿನಗಳು ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯ ದರ್ಶನ ಈ ಬಾರಿ ಸಾರ್ವಜನಿಕರಿಗೆ ಸುಗಮವಾಗಿ ಲಭಿಸುತ್ತಿದೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಡಳಿತವು ಪೂರ್ವ ಯೋಚಿತವಾಗಿ ಅನೇಕ ಬದಲಾವಣೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಜನಸಂದಣಿ ಆಗದಂತೆ ಅನೇಕ ಕ್ರಮಗಳನ್ನು ಕೈಗೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಕಳೆದ ವರ್ಷ ಉಂಟಾದ ಅವ್ಯವಸ್ಥೆಯಿಂದಾಗಿ ವಿಐಪಿ ಸಂಸ್ಕೃತಿ ಹಾಗೂ ಜಿಲ್ಲಾಡಳಿತದ ವಿರುದ್ಧ ಜನರು ಛೀಮಾರಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ದರಿಂದ ಈ ಬಾರಿ ಅಗತ್ಯ ಕ್ರಮ ವಹಿಸಲಾಗಿದ್ದು, ೩೦೦ ರೂ. ಮತ್ತು ೧,೦೦೦ ರೂ.ಗಳ ಟಿಕೆಟ್ಗಳನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಬೇಗ ದರ್ಶನವಾಗುತ್ತಿದೆ. ಅದೇ ರೀತಿ ಮೂರು ಅಥವಾ ನಾಲ್ಕು ಗಂಟೆಗಳ ಒಳಗೆ ಭಕ್ತರಿಗೆ ಧರ್ಮ ದರ್ಶನವಾಗುತ್ತಿದೆ.

ಜಿಲ್ಲಾಡಳಿತದಿಂದ ವಿಐಪಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ. ಹಾಸನಾಂಬೆ ದೇವಾಲಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಪ್ರತ್ಯೇಕವಾದ ಗುರುತಿನ ಚೀಟಿ ನೀಡಲಾಗಿದ್ದು, ಅದರ ದುರುಪ ಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಖುದ್ದು ತಾವೇ ಎಲ್ಲಾ ವ್ಯವಸ್ಥೆಯನ್ನು ಪರಿಶೀಲಿಸಿ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಸನಾಂಬೆಯ ದರ್ಶನ ಮಾಡಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದಗಳು.

-ಪಿ.ಎನ್. ಪರಶಿವಮೂರ್ತಿ , ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರಗ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

15 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

30 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

42 mins ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

53 mins ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

1 hour ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

1 hour ago