Andolana originals

ಓದುಗರ ಪತ್ರ: ಹಾಸನಾಂಬೆ ದರ್ಶನಕ್ಕೆ ಸುಗಮ ವ್ಯವಸ್ಥೆ ಶ್ಲಾಘನೀಯ

ವರ್ಷಕ್ಕೊಮ್ಮೆ ಕೆಲವು ದಿನಗಳು ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯ ದರ್ಶನ ಈ ಬಾರಿ ಸಾರ್ವಜನಿಕರಿಗೆ ಸುಗಮವಾಗಿ ಲಭಿಸುತ್ತಿದೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಡಳಿತವು ಪೂರ್ವ ಯೋಚಿತವಾಗಿ ಅನೇಕ ಬದಲಾವಣೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಜನಸಂದಣಿ ಆಗದಂತೆ ಅನೇಕ ಕ್ರಮಗಳನ್ನು ಕೈಗೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಕಳೆದ ವರ್ಷ ಉಂಟಾದ ಅವ್ಯವಸ್ಥೆಯಿಂದಾಗಿ ವಿಐಪಿ ಸಂಸ್ಕೃತಿ ಹಾಗೂ ಜಿಲ್ಲಾಡಳಿತದ ವಿರುದ್ಧ ಜನರು ಛೀಮಾರಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ದರಿಂದ ಈ ಬಾರಿ ಅಗತ್ಯ ಕ್ರಮ ವಹಿಸಲಾಗಿದ್ದು, ೩೦೦ ರೂ. ಮತ್ತು ೧,೦೦೦ ರೂ.ಗಳ ಟಿಕೆಟ್ಗಳನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಬೇಗ ದರ್ಶನವಾಗುತ್ತಿದೆ. ಅದೇ ರೀತಿ ಮೂರು ಅಥವಾ ನಾಲ್ಕು ಗಂಟೆಗಳ ಒಳಗೆ ಭಕ್ತರಿಗೆ ಧರ್ಮ ದರ್ಶನವಾಗುತ್ತಿದೆ.

ಜಿಲ್ಲಾಡಳಿತದಿಂದ ವಿಐಪಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ. ಹಾಸನಾಂಬೆ ದೇವಾಲಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಪ್ರತ್ಯೇಕವಾದ ಗುರುತಿನ ಚೀಟಿ ನೀಡಲಾಗಿದ್ದು, ಅದರ ದುರುಪ ಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಖುದ್ದು ತಾವೇ ಎಲ್ಲಾ ವ್ಯವಸ್ಥೆಯನ್ನು ಪರಿಶೀಲಿಸಿ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಸನಾಂಬೆಯ ದರ್ಶನ ಮಾಡಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದಗಳು.

-ಪಿ.ಎನ್. ಪರಶಿವಮೂರ್ತಿ , ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago