ಓದುಗರ ಪತ್ರ
ವರ್ಷಕ್ಕೊಮ್ಮೆ ಕೆಲವು ದಿನಗಳು ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯ ದರ್ಶನ ಈ ಬಾರಿ ಸಾರ್ವಜನಿಕರಿಗೆ ಸುಗಮವಾಗಿ ಲಭಿಸುತ್ತಿದೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಡಳಿತವು ಪೂರ್ವ ಯೋಚಿತವಾಗಿ ಅನೇಕ ಬದಲಾವಣೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಜನಸಂದಣಿ ಆಗದಂತೆ ಅನೇಕ ಕ್ರಮಗಳನ್ನು ಕೈಗೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಕಳೆದ ವರ್ಷ ಉಂಟಾದ ಅವ್ಯವಸ್ಥೆಯಿಂದಾಗಿ ವಿಐಪಿ ಸಂಸ್ಕೃತಿ ಹಾಗೂ ಜಿಲ್ಲಾಡಳಿತದ ವಿರುದ್ಧ ಜನರು ಛೀಮಾರಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ದರಿಂದ ಈ ಬಾರಿ ಅಗತ್ಯ ಕ್ರಮ ವಹಿಸಲಾಗಿದ್ದು, ೩೦೦ ರೂ. ಮತ್ತು ೧,೦೦೦ ರೂ.ಗಳ ಟಿಕೆಟ್ಗಳನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಬೇಗ ದರ್ಶನವಾಗುತ್ತಿದೆ. ಅದೇ ರೀತಿ ಮೂರು ಅಥವಾ ನಾಲ್ಕು ಗಂಟೆಗಳ ಒಳಗೆ ಭಕ್ತರಿಗೆ ಧರ್ಮ ದರ್ಶನವಾಗುತ್ತಿದೆ.
ಜಿಲ್ಲಾಡಳಿತದಿಂದ ವಿಐಪಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ. ಹಾಸನಾಂಬೆ ದೇವಾಲಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಪ್ರತ್ಯೇಕವಾದ ಗುರುತಿನ ಚೀಟಿ ನೀಡಲಾಗಿದ್ದು, ಅದರ ದುರುಪ ಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಖುದ್ದು ತಾವೇ ಎಲ್ಲಾ ವ್ಯವಸ್ಥೆಯನ್ನು ಪರಿಶೀಲಿಸಿ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಸನಾಂಬೆಯ ದರ್ಶನ ಮಾಡಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದಗಳು.
-ಪಿ.ಎನ್. ಪರಶಿವಮೂರ್ತಿ , ನಂಜೀಪುರ, ಸರಗೂರು ತಾ.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…