Andolana originals

ಓದುಗರ ಪತ್ರ: ಹಾಸನಾಂಬೆ ದರ್ಶನಕ್ಕೆ ಸುಗಮ ವ್ಯವಸ್ಥೆ ಶ್ಲಾಘನೀಯ

ವರ್ಷಕ್ಕೊಮ್ಮೆ ಕೆಲವು ದಿನಗಳು ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯ ದರ್ಶನ ಈ ಬಾರಿ ಸಾರ್ವಜನಿಕರಿಗೆ ಸುಗಮವಾಗಿ ಲಭಿಸುತ್ತಿದೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಡಳಿತವು ಪೂರ್ವ ಯೋಚಿತವಾಗಿ ಅನೇಕ ಬದಲಾವಣೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಜನಸಂದಣಿ ಆಗದಂತೆ ಅನೇಕ ಕ್ರಮಗಳನ್ನು ಕೈಗೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಕಳೆದ ವರ್ಷ ಉಂಟಾದ ಅವ್ಯವಸ್ಥೆಯಿಂದಾಗಿ ವಿಐಪಿ ಸಂಸ್ಕೃತಿ ಹಾಗೂ ಜಿಲ್ಲಾಡಳಿತದ ವಿರುದ್ಧ ಜನರು ಛೀಮಾರಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ದರಿಂದ ಈ ಬಾರಿ ಅಗತ್ಯ ಕ್ರಮ ವಹಿಸಲಾಗಿದ್ದು, ೩೦೦ ರೂ. ಮತ್ತು ೧,೦೦೦ ರೂ.ಗಳ ಟಿಕೆಟ್ಗಳನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಬೇಗ ದರ್ಶನವಾಗುತ್ತಿದೆ. ಅದೇ ರೀತಿ ಮೂರು ಅಥವಾ ನಾಲ್ಕು ಗಂಟೆಗಳ ಒಳಗೆ ಭಕ್ತರಿಗೆ ಧರ್ಮ ದರ್ಶನವಾಗುತ್ತಿದೆ.

ಜಿಲ್ಲಾಡಳಿತದಿಂದ ವಿಐಪಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ. ಹಾಸನಾಂಬೆ ದೇವಾಲಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಪ್ರತ್ಯೇಕವಾದ ಗುರುತಿನ ಚೀಟಿ ನೀಡಲಾಗಿದ್ದು, ಅದರ ದುರುಪ ಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಖುದ್ದು ತಾವೇ ಎಲ್ಲಾ ವ್ಯವಸ್ಥೆಯನ್ನು ಪರಿಶೀಲಿಸಿ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಸನಾಂಬೆಯ ದರ್ಶನ ಮಾಡಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದಗಳು.

-ಪಿ.ಎನ್. ಪರಶಿವಮೂರ್ತಿ , ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago