Andolana originals

ಓದುಗರ ಪತ್ರ: ಯುವಕರಿಂದ ಸಮಾಜ ಜಾಗೃತಗೊಳ್ಳಬೇಕು

ಸರಗೂರು ತಾಲ್ಲೂಕಿನ ಕಲ್ಲಂಬಾಳು ಗ್ರಾಮದಲ್ಲಿ ಕಪಿಲ ನದಿಯ ದಂಡೆಯ ಮೇಲೆ ಐತಿಹಾಸಿಕ ಕಾಮೇಶ್ವರ ದೇವರ ದೇವಾಲಯವಿದೆ. ಈ ದೇವಾಲಯ ಚೋಳರಿಂದ ನಿರ್ಮಾಣ ವಾಯಿತು ಎಂಬ ಇತಿಹಾಸವನ್ನು ಹೊಂದಿದ್ದು, ಶಿಥಿಲಗೊಂಡಿದ್ದ ಈ ದೇವಾಲಯದ ದುರಸ್ತಿಗೆ ಕಳೆದ ವರ್ಷ ಊರಿನ ಮುಖಂಡರು ಸೇರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಮರು ನಿರ್ಮಾಣ ಮಾಡಲು ಆದೇಶ ಪಡೆದು, ಅದರಂತೆ ನೂತನ ದೇವಾಲಯ ನಿರ್ಮಿಸಿ ಫೆಬ್ರವರಿ ೧೦ರಂದು ಉದ್ಘಾಟನೆ ಮಾಡಲಾಗಿದೆ.

ಈ ಹಿಂದೆ ದೇವಾಲಯದ ಒಳಗೆ ತಳ ಸಮುದಾಯದ ಜನರ ಪ್ರವೇಶ ವನ್ನು ನಿಷೇಧಿಸಲಾಗಿತ್ತು. ಜಾತಿ ವ್ಯವಸ್ಥೆ, ಜೀತ ಪದ್ಧತಿ, ಅನಾಗರಿಕತೆ, ಮೂಢನಂಬಿಕೆ, ಶಿಕ್ಷಣದ ಕೊರತೆ ಹೆಚ್ಚಾಗಿದ್ದು, ಈ ವ್ಯವಸ್ಥೆ ಪ್ರಸ್ತುತವೂ ಅನೇಕ ಹಳ್ಳಿಗಳಲ್ಲಿ ಜೀವಂತವಾಗಿರುವುದು ಬೇಸರದ ಸಂಗತಿ. ಆದರೆ, ಈ ದೇವಸ್ಥಾನ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ಬಳಿಕ ಸರ್ಕಾರ ಎಲ್ಲ ಜನಾಂಗದ ಜನರೂ ದೇವಾಲಯ ಪ್ರವೇಶಿಸಬಹುದು. ಇದನ್ನು ವಿರೋಧಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಫಲಕ ಅಳವಡಿಸಿತ್ತು. ಆದರೆ, ಕೆಲವೇ ದಿನಗಳಲ್ಲಿ ಅದು ಮಾಯವಾಯಿತು.

ಇದನ್ನು ಅರಿತ ಗ್ರಾಮದ ತಳ ಸಮುದಾಯದ ವಿದ್ಯಾವಂತ ಯುವಕರು ಒಗ್ಗಟ್ಟಿನಿಂದ ಈ ಶೋಷಣೆಯ ವಿರುದ್ಧ ಧ್ವನಿ ಎತ್ತಿದರು. ಆ ಮೂಲಕ ನೂತನ ಕಾಮೇಶ್ವರ ದೇವಸ್ಥಾನದ ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದರು. ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಾ ಸಮಾನತೆಯನ್ನು ಸಾರಿದರು. ಈ ಬದಲಾವಣೆ ಎಲ್ಲ ಗ್ರಾಮಗಳಲ್ಲಿಯೂ ಆಗಬೇಕು. ಇದು  ಯುವಕರಿಂದ ಮಾತ್ರವಲ್ಲದೆ ಹಿರಿಯ ನಾಗರಿಕರೂ ಇಂತಹ ಬದಲಾವಣೆಗೆ ನಾಂದಿ ಹಾಡಬೇಕು ಆಗ ಮಾತ್ರ ಸಮಾಜದಲ್ಲಿ ಸಮಾನತೆ ಸ್ಥಾಪಿಸಲು ಸಾಧ್ಯ.

-ಕೆ.ಎಂ.ಅಭಿಷೇಕ್, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago