Andolana originals

ಓದುಗರ ಪತ್ರ: ಯುವಕರಿಂದ ಸಮಾಜ ಜಾಗೃತಗೊಳ್ಳಬೇಕು

ಸರಗೂರು ತಾಲ್ಲೂಕಿನ ಕಲ್ಲಂಬಾಳು ಗ್ರಾಮದಲ್ಲಿ ಕಪಿಲ ನದಿಯ ದಂಡೆಯ ಮೇಲೆ ಐತಿಹಾಸಿಕ ಕಾಮೇಶ್ವರ ದೇವರ ದೇವಾಲಯವಿದೆ. ಈ ದೇವಾಲಯ ಚೋಳರಿಂದ ನಿರ್ಮಾಣ ವಾಯಿತು ಎಂಬ ಇತಿಹಾಸವನ್ನು ಹೊಂದಿದ್ದು, ಶಿಥಿಲಗೊಂಡಿದ್ದ ಈ ದೇವಾಲಯದ ದುರಸ್ತಿಗೆ ಕಳೆದ ವರ್ಷ ಊರಿನ ಮುಖಂಡರು ಸೇರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಮರು ನಿರ್ಮಾಣ ಮಾಡಲು ಆದೇಶ ಪಡೆದು, ಅದರಂತೆ ನೂತನ ದೇವಾಲಯ ನಿರ್ಮಿಸಿ ಫೆಬ್ರವರಿ ೧೦ರಂದು ಉದ್ಘಾಟನೆ ಮಾಡಲಾಗಿದೆ.

ಈ ಹಿಂದೆ ದೇವಾಲಯದ ಒಳಗೆ ತಳ ಸಮುದಾಯದ ಜನರ ಪ್ರವೇಶ ವನ್ನು ನಿಷೇಧಿಸಲಾಗಿತ್ತು. ಜಾತಿ ವ್ಯವಸ್ಥೆ, ಜೀತ ಪದ್ಧತಿ, ಅನಾಗರಿಕತೆ, ಮೂಢನಂಬಿಕೆ, ಶಿಕ್ಷಣದ ಕೊರತೆ ಹೆಚ್ಚಾಗಿದ್ದು, ಈ ವ್ಯವಸ್ಥೆ ಪ್ರಸ್ತುತವೂ ಅನೇಕ ಹಳ್ಳಿಗಳಲ್ಲಿ ಜೀವಂತವಾಗಿರುವುದು ಬೇಸರದ ಸಂಗತಿ. ಆದರೆ, ಈ ದೇವಸ್ಥಾನ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ಬಳಿಕ ಸರ್ಕಾರ ಎಲ್ಲ ಜನಾಂಗದ ಜನರೂ ದೇವಾಲಯ ಪ್ರವೇಶಿಸಬಹುದು. ಇದನ್ನು ವಿರೋಧಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಫಲಕ ಅಳವಡಿಸಿತ್ತು. ಆದರೆ, ಕೆಲವೇ ದಿನಗಳಲ್ಲಿ ಅದು ಮಾಯವಾಯಿತು.

ಇದನ್ನು ಅರಿತ ಗ್ರಾಮದ ತಳ ಸಮುದಾಯದ ವಿದ್ಯಾವಂತ ಯುವಕರು ಒಗ್ಗಟ್ಟಿನಿಂದ ಈ ಶೋಷಣೆಯ ವಿರುದ್ಧ ಧ್ವನಿ ಎತ್ತಿದರು. ಆ ಮೂಲಕ ನೂತನ ಕಾಮೇಶ್ವರ ದೇವಸ್ಥಾನದ ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದರು. ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಾ ಸಮಾನತೆಯನ್ನು ಸಾರಿದರು. ಈ ಬದಲಾವಣೆ ಎಲ್ಲ ಗ್ರಾಮಗಳಲ್ಲಿಯೂ ಆಗಬೇಕು. ಇದು  ಯುವಕರಿಂದ ಮಾತ್ರವಲ್ಲದೆ ಹಿರಿಯ ನಾಗರಿಕರೂ ಇಂತಹ ಬದಲಾವಣೆಗೆ ನಾಂದಿ ಹಾಡಬೇಕು ಆಗ ಮಾತ್ರ ಸಮಾಜದಲ್ಲಿ ಸಮಾನತೆ ಸ್ಥಾಪಿಸಲು ಸಾಧ್ಯ.

-ಕೆ.ಎಂ.ಅಭಿಷೇಕ್, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

ಆಂದೋಲನ ಡೆಸ್ಕ್

Recent Posts

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

1 hour ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

3 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

4 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

4 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

4 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

4 hours ago