ಓದುಗರ ಪತ್ರ
ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಹೆಚ್ಚಾಗುತ್ತಿದ್ದು, ಪಡಿತರ ಪಡೆಯಲು ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಗಳನ್ನು ಬಿಟ್ಟು ದಿನಪೂರ್ತಿ ನ್ಯಾಯಬೆಲೆ ಅಂಗಡಿಯ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ.
ಗ್ರಾಮೀಣ ಭಾಗಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವ ಸಮಸ್ಯೆ ಹೆಚ್ಚಾಗಿದ್ದು, ಜನರು ಪಡಿತರ ಪಡೆಯಲು ನಿತ್ಯ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಗ್ರಾಮೀಣ ಭಾಗದ ಬಹುತೇಕ ಜನರು ಕೂಲಿ ಕೆಲಸ, ಕೃಷಿಯನ್ನು ಆಧರಿಸಿ ಜೀವನ ಸಾಗಿಸುತ್ತಿದ್ದಾರೆ, ನಿತ್ಯ ದುಡಿದರೆ ಮಾತ್ರ ಅವರ ಜೀವನದ ಬಂಡಿ ಸಾಗುತ್ತದೆ.
ಹೀಗಾಗಿ ಬೆಳಿಗ್ಗೆಯೇ ಹೋಗಿ ಪಡಿತರ ತಂದು ನಂತರ ಕೆಲಸಕ್ಕೆ ಹೋಗುವ ಉದ್ದೇಶದಿಂದ ಅನೇಕ ಮಂದಿ ಬೆಳಿಗ್ಗೆ 8 ಗಂಟೆಗೇ ನ್ಯಾಯಬೆಲೆ ಅಂಗಡಿಗಳ ಮುಂದೆ ನಿಲ್ಲುತ್ತಾರೆ. ಆದರೆ ಇಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಅಕ್ಕಿ ಸಿಗುವುದು ತಡವಾಗುತ್ತಿದ್ದು, ಆ ದಿನದ ಕೆಲಸವನ್ನು ಕಳೆದುಕೊಳ್ಳುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಸಮಸ್ಯೆಯನ್ನು ಗಮನಹರಿಸಿ ಕೂಡಲೇ ಬಗೆಹರಿಸಬೇಕಿದೆ.
-ಕೆ.ಎಸ್.ಸುರೇಶ್, ಕೆ.ಜಿ.ಹಳ್ಳಿ, ಎಚ್.ಡಿ.ಕೋಟೆ ತಾ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…