Andolana originals

ಓದುಗರ ಪತ್ರ: ಸರ್ವರ್ ಸಮಸ್ಯೆ ಬಗೆಹರಿಸಿ

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಹೆಚ್ಚಾಗುತ್ತಿದ್ದು, ಪಡಿತರ ಪಡೆಯಲು ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಗಳನ್ನು ಬಿಟ್ಟು ದಿನಪೂರ್ತಿ ನ್ಯಾಯಬೆಲೆ ಅಂಗಡಿಯ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ.

ಗ್ರಾಮೀಣ ಭಾಗಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವ‌ ಸಮಸ್ಯೆ ಹೆಚ್ಚಾಗಿದ್ದು, ಜನರು ಪಡಿತರ ಪಡೆಯಲು ನಿತ್ಯ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಗ್ರಾಮೀಣ ಭಾಗದ ಬಹುತೇಕ ಜನರು ಕೂಲಿ ಕೆಲಸ, ಕೃಷಿಯನ್ನು ಆಧರಿಸಿ ಜೀವನ ಸಾಗಿಸುತ್ತಿದ್ದಾರೆ, ನಿತ್ಯ ದುಡಿದರೆ ಮಾತ್ರ ಅವರ ಜೀವನದ ಬಂಡಿ ಸಾಗುತ್ತದೆ.

ಹೀಗಾಗಿ ಬೆಳಿಗ್ಗೆಯೇ ಹೋಗಿ ಪಡಿತರ ತಂದು ನಂತರ ಕೆಲಸಕ್ಕೆ ಹೋಗುವ ಉದ್ದೇಶದಿಂದ ಅನೇಕ ಮಂದಿ ಬೆಳಿಗ್ಗೆ 8 ಗಂಟೆಗೇ ನ್ಯಾಯಬೆಲೆ ಅಂಗಡಿಗಳ ಮುಂದೆ ನಿಲ್ಲುತ್ತಾರೆ. ಆದರೆ ಇಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಅಕ್ಕಿ ಸಿಗುವುದು ತಡವಾಗುತ್ತಿದ್ದು, ಆ ದಿನದ ಕೆಲಸವನ್ನು ಕಳೆದುಕೊಳ್ಳುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಸಮಸ್ಯೆಯನ್ನು ಗಮನಹರಿಸಿ ಕೂಡಲೇ ಬಗೆಹರಿಸಬೇಕಿದೆ.

-ಕೆ.ಎಸ್.ಸುರೇಶ್, ಕೆ.ಜಿ.ಹಳ್ಳಿ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

23 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

23 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

23 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

23 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

24 hours ago