ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು ಓಡಾಡಲು ಆತಂಕ ಪಡುವಂತಾಗಿದೆ. ಈ ಬಡಾವಣೆಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ೮. ೦೦ ಗಂಟೆಯ ನಂತರ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಅಲ್ಲದೆ ಈ ನಾಯಿಗಳು ಬೈಕ್ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದು, ನಾಯಿಗಳಿಗೆ ಹೆದರಿ ಸವಾರರು ಬೈಕ್ಗಳನ್ನು ವೇಗವಾಗಿ ಓಡಿಸಿ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಇನ್ನು ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಈ ಬಡವಾಣೆಗಳಲ್ಲಿ ಆತಂಕದಿಂದಲೇ ಓಡಾಡುತ್ತಿದ್ದು, ಶಾಲೆಗೆ ಹೋಗುವ ಮಕ್ಕಳ ಮೇಲೆ ಈ ನಾಯಿಗಳು ದಾಳಿ ಮಾಡಬಹುದು ಎಂಬ ಆತಂಕ ಶುರುವಾಗಿದೆ. ಬೀದಿ ನಾಯಿಗಳಿಗೆ ಸರಿಯಾದ ರೀತಿಯಲ್ಲಿ ಸಂತಾನಹರಣ ಚಿಕಿತ್ಸೆ ಮಾಡದಿರುವುದೇ ನಾಯಿಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಲ್ಲದೆ ಅನೇಕ ಭಾಗಗಳಲ್ಲಿ ಮಾಂಸದಂಗಡಿಯವರು ಸರಿಯಾದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡದ ಪರಿಣಾಮ ನಿತ್ಯ ಮಾಂಸ ಸೇವಿಸುವ ಈ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತಿವೆ. ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯವರು ಬೀದಿನಾಯಿಗಳಿಗೆ ಸರಿಯಾದ ಕ್ರಮದಲ್ಲಿ ಸಂತಾನಹರಣ ಚಿಕಿತ್ಸೆ ಮಾಡಿಸಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…