Andolana originals

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು ಓಡಾಡಲು ಆತಂಕ ಪಡುವಂತಾಗಿದೆ. ಈ ಬಡಾವಣೆಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ೮. ೦೦ ಗಂಟೆಯ ನಂತರ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಅಲ್ಲದೆ ಈ ನಾಯಿಗಳು ಬೈಕ್ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದು, ನಾಯಿಗಳಿಗೆ ಹೆದರಿ ಸವಾರರು ಬೈಕ್‌ಗಳನ್ನು ವೇಗವಾಗಿ ಓಡಿಸಿ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಇನ್ನು ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಈ ಬಡವಾಣೆಗಳಲ್ಲಿ ಆತಂಕದಿಂದಲೇ ಓಡಾಡುತ್ತಿದ್ದು, ಶಾಲೆಗೆ ಹೋಗುವ ಮಕ್ಕಳ ಮೇಲೆ ಈ ನಾಯಿಗಳು ದಾಳಿ ಮಾಡಬಹುದು ಎಂಬ ಆತಂಕ ಶುರುವಾಗಿದೆ. ಬೀದಿ ನಾಯಿಗಳಿಗೆ ಸರಿಯಾದ ರೀತಿಯಲ್ಲಿ ಸಂತಾನಹರಣ ಚಿಕಿತ್ಸೆ ಮಾಡದಿರುವುದೇ ನಾಯಿಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಲ್ಲದೆ ಅನೇಕ ಭಾಗಗಳಲ್ಲಿ ಮಾಂಸದಂಗಡಿಯವರು ಸರಿಯಾದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡದ ಪರಿಣಾಮ ನಿತ್ಯ ಮಾಂಸ ಸೇವಿಸುವ ಈ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತಿವೆ. ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯವರು ಬೀದಿನಾಯಿಗಳಿಗೆ ಸರಿಯಾದ ಕ್ರಮದಲ್ಲಿ ಸಂತಾನಹರಣ ಚಿಕಿತ್ಸೆ ಮಾಡಿಸಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

21 mins ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

3 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

3 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

7 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

7 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

7 hours ago