Andolana originals

ಓದುಗರ ಪತ್ರ| ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿ

ಸೆಪ್ಟೆಂಬರ್ 5ರ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನವನ್ನು ‘ಶಿಕ್ಷಕರ ದಿನಾಚರಣೆ’ ಎಂದು ಆಚರಿಸುವ ಮೂಲಕ ಶಿಕ್ಷಕರಿಗೆ ಗೌರವ ಸೂಚಿಸಲಾಗುತ್ತಿದೆ.

ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು, ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಅವ ರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ.

ಅದೇ ರೀತಿ ಸರ್ಕಾರವೂ ಪ್ರತಿವರ್ಷ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಗಮನಾರ್ಹವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಅವರಿಗೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸರಿಯಷ್ಟೇ. ಆದರೆ ಶಿಕ್ಷಕರು ಇಂದಿಗೂ ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಪರಿಹರಿಸುವತ್ತ ಸರ್ಕಾರ ಗಮನಹರಿಸದಿರುವುದು ಬೇಸರದ ಸಂಗತಿ.

ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲ ಸೌಕರ್ಯಗಳಿಲ್ಲ. ಕಟ್ಟಡಗಳು ಕುಸಿದು ಬೀಳುವ ಹಂತದಲ್ಲಿದ್ದರೂ ಶಿಕ್ಷಕರು ವಿಧಿ ಇಲ್ಲದೆ ಅದೇ ಸೂರಿನಡಿ ಮಕ್ಕಳಿಗೆ ಬೋಧನೆ ಮಾಡಬೇಕಿದೆ. ಕೆಲ ಶಿಕ್ಷಕರಿಗೆ ತಮ್ಮ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗವಿಲ್ಲ. ಜತೆಗೆ ಸರಿಯಾದ ಸಮಯಕ್ಕೆ ಮುಂಬಡ್ತಿ ಸಿಗದೆ ಹಾಗೂ ವೇತನವೂ ಹೆಚ್ಚಾಗದೆ ಅಲ್ಪ ಸಂಬಳದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇನ್ನು ಗ್ರಾಮಾಂತರ ಭಾಗಗಳ ಹಲವಾರು ಹಳ್ಳಿಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದಿದ್ದರೂ ಶಿಕ್ಷಕರು ಕಷ್ಟಪಟ್ಟು ಆ ಶಾಲೆಗಳನ್ನು ತಲುಪಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ. ಅಲ್ಲಿಯೇ ಉಳಿದುಕೊಂಡು ಕೆಲಸ ಮಾಡಲು ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ಇಷ್ಟೆಲ್ಲ ಸಮಸ್ಯೆಗಳ ಸುಳಿಯಲ್ಲಿ ಶಿಕ್ಷಕರು ಸಿಲುಕಿದ್ದರೂ ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಮಕ್ಕಳಿಗೆ ಪಾಠ ಮಾಡುತ್ತಿ ದ್ದಾರೆ. ಆದ್ದರಿಂದ ಸರ್ಕಾರ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿದರಷ್ಟೇ ಸಾಲದು ಅವರ ಸಮಸ್ಯೆಗಳನ್ನೂ ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago