ಸೆಪ್ಟೆಂಬರ್ 5ರ ಸರ್ವಪಲ್ಲಿ ರಾಧಾಕೃಷ್ಣನ್ರವರ ಜನ್ಮದಿನವನ್ನು ‘ಶಿಕ್ಷಕರ ದಿನಾಚರಣೆ’ ಎಂದು ಆಚರಿಸುವ ಮೂಲಕ ಶಿಕ್ಷಕರಿಗೆ ಗೌರವ ಸೂಚಿಸಲಾಗುತ್ತಿದೆ.
ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು, ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಅವ ರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ.
ಅದೇ ರೀತಿ ಸರ್ಕಾರವೂ ಪ್ರತಿವರ್ಷ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಗಮನಾರ್ಹವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಅವರಿಗೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸರಿಯಷ್ಟೇ. ಆದರೆ ಶಿಕ್ಷಕರು ಇಂದಿಗೂ ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಪರಿಹರಿಸುವತ್ತ ಸರ್ಕಾರ ಗಮನಹರಿಸದಿರುವುದು ಬೇಸರದ ಸಂಗತಿ.
ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲ ಸೌಕರ್ಯಗಳಿಲ್ಲ. ಕಟ್ಟಡಗಳು ಕುಸಿದು ಬೀಳುವ ಹಂತದಲ್ಲಿದ್ದರೂ ಶಿಕ್ಷಕರು ವಿಧಿ ಇಲ್ಲದೆ ಅದೇ ಸೂರಿನಡಿ ಮಕ್ಕಳಿಗೆ ಬೋಧನೆ ಮಾಡಬೇಕಿದೆ. ಕೆಲ ಶಿಕ್ಷಕರಿಗೆ ತಮ್ಮ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗವಿಲ್ಲ. ಜತೆಗೆ ಸರಿಯಾದ ಸಮಯಕ್ಕೆ ಮುಂಬಡ್ತಿ ಸಿಗದೆ ಹಾಗೂ ವೇತನವೂ ಹೆಚ್ಚಾಗದೆ ಅಲ್ಪ ಸಂಬಳದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇನ್ನು ಗ್ರಾಮಾಂತರ ಭಾಗಗಳ ಹಲವಾರು ಹಳ್ಳಿಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದಿದ್ದರೂ ಶಿಕ್ಷಕರು ಕಷ್ಟಪಟ್ಟು ಆ ಶಾಲೆಗಳನ್ನು ತಲುಪಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ. ಅಲ್ಲಿಯೇ ಉಳಿದುಕೊಂಡು ಕೆಲಸ ಮಾಡಲು ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ಇಷ್ಟೆಲ್ಲ ಸಮಸ್ಯೆಗಳ ಸುಳಿಯಲ್ಲಿ ಶಿಕ್ಷಕರು ಸಿಲುಕಿದ್ದರೂ ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಮಕ್ಕಳಿಗೆ ಪಾಠ ಮಾಡುತ್ತಿ ದ್ದಾರೆ. ಆದ್ದರಿಂದ ಸರ್ಕಾರ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿದರಷ್ಟೇ ಸಾಲದು ಅವರ ಸಮಸ್ಯೆಗಳನ್ನೂ ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…