Andolana originals

ಓದುಗರ ಪತ್ರ| ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿ

ಸೆಪ್ಟೆಂಬರ್ 5ರ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನವನ್ನು ‘ಶಿಕ್ಷಕರ ದಿನಾಚರಣೆ’ ಎಂದು ಆಚರಿಸುವ ಮೂಲಕ ಶಿಕ್ಷಕರಿಗೆ ಗೌರವ ಸೂಚಿಸಲಾಗುತ್ತಿದೆ.

ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು, ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಅವ ರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ.

ಅದೇ ರೀತಿ ಸರ್ಕಾರವೂ ಪ್ರತಿವರ್ಷ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಗಮನಾರ್ಹವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಅವರಿಗೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸರಿಯಷ್ಟೇ. ಆದರೆ ಶಿಕ್ಷಕರು ಇಂದಿಗೂ ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಪರಿಹರಿಸುವತ್ತ ಸರ್ಕಾರ ಗಮನಹರಿಸದಿರುವುದು ಬೇಸರದ ಸಂಗತಿ.

ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲ ಸೌಕರ್ಯಗಳಿಲ್ಲ. ಕಟ್ಟಡಗಳು ಕುಸಿದು ಬೀಳುವ ಹಂತದಲ್ಲಿದ್ದರೂ ಶಿಕ್ಷಕರು ವಿಧಿ ಇಲ್ಲದೆ ಅದೇ ಸೂರಿನಡಿ ಮಕ್ಕಳಿಗೆ ಬೋಧನೆ ಮಾಡಬೇಕಿದೆ. ಕೆಲ ಶಿಕ್ಷಕರಿಗೆ ತಮ್ಮ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗವಿಲ್ಲ. ಜತೆಗೆ ಸರಿಯಾದ ಸಮಯಕ್ಕೆ ಮುಂಬಡ್ತಿ ಸಿಗದೆ ಹಾಗೂ ವೇತನವೂ ಹೆಚ್ಚಾಗದೆ ಅಲ್ಪ ಸಂಬಳದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇನ್ನು ಗ್ರಾಮಾಂತರ ಭಾಗಗಳ ಹಲವಾರು ಹಳ್ಳಿಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದಿದ್ದರೂ ಶಿಕ್ಷಕರು ಕಷ್ಟಪಟ್ಟು ಆ ಶಾಲೆಗಳನ್ನು ತಲುಪಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ. ಅಲ್ಲಿಯೇ ಉಳಿದುಕೊಂಡು ಕೆಲಸ ಮಾಡಲು ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ಇಷ್ಟೆಲ್ಲ ಸಮಸ್ಯೆಗಳ ಸುಳಿಯಲ್ಲಿ ಶಿಕ್ಷಕರು ಸಿಲುಕಿದ್ದರೂ ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಮಕ್ಕಳಿಗೆ ಪಾಠ ಮಾಡುತ್ತಿ ದ್ದಾರೆ. ಆದ್ದರಿಂದ ಸರ್ಕಾರ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿದರಷ್ಟೇ ಸಾಲದು ಅವರ ಸಮಸ್ಯೆಗಳನ್ನೂ ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

3 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

7 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

8 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

8 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

12 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

12 hours ago