Andolana originals

ಓದುಗರ ಪತ್ರ| ಟ್ರಾಫಿಕ್ ಸಮಸ್ಯೆ ತಪ್ಪಿಸಿ

ಮೈಸೂರಿನ ಪರಸಯ್ಯನಹುಂಡಿ ವರ್ತುಲ ರಸ್ತೆಯ ವೃತ್ತದಲ್ಲಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತಿದೆ.

ಈ ಜಂಕ್ಷನ್‌ನಲ್ಲಿ ವಾಹನ ಹೆಚ್ಚಾಗಿರುವುದರಿಂದ ಸಿಗ್ನಲ್ ಅಳವಡಿಸಲಾಗಿದೆ. ದಟ್ಟಣೆ ಆದರೆ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್‌ಗಳು ಹಾಗೂ ಕೆಲ ಖಾಸಗಿ ವಾಹನಗಳು ಜನರನ್ನು ಹತ್ತಿಸಿಕೊಳ್ಳಲು ಸಿಗ್ನಲ್ ಪಕ್ಕದಲ್ಲೇ ನಿಲುಗಡೆ ನೀಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ.

ಅಲ್ಲದೆ ಕೆಲ ಖಾಸಗಿ ವಾಹನಗಳು ಜನರನ್ನು ಹತ್ತಿಸಿಕೊಳ್ಳುವ ಸಲುವಾಗಿ ಸಿಗ್ನಲ್ ಸಮೀಪವೇ ರಸ್ತೆಯಲ್ಲಿ ಹೆಚ್ಚು ಸಮಯ ನಿಂತಿರುತ್ತವೆ. ಇದರಿಂದ ಹಿಂದೆ ಬರುವ ವಾಹನಗಳು ಮುಂದೆ ಸಂಚರಿಸಲು ಪರದಾಡುವಂತಾಗುತ್ತದೆ. ಜತೆಗೆ ಈ ವೃತ್ತದಿಂದ 100 ಮೀ. ಅಂತರದಲ್ಲಿಯೇ ಪೊಲೀಸ್ ಚೆಕ್ ಪೋಸ್ಟ್ ಇದ್ದರೂ ಇಲ್ಲಿನ ಟ್ರಾಫಿಕ್ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೊಲೀಸ್ ಚೆಕ್ ಪೋಸ್ಟ್ ಸಮೀಪದಲ್ಲಿಯೇ ಬಸ್ ನಿಲ್ದಾಣ ನಿರ್ಮಿಸಿ ಅಲ್ಲಿಯೇ ನಿಲುಗಡೆ ನೀಡುವಂತೆ ಮಾಡಬೇಕಿದೆ. ಇದರಿಂದ ವಾಹನ ದಟ್ಟಣೆಯೂ ಕಡಿಮೆಯಾಗಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗುತ್ತದೆ.
-ಮಂಜೇಶ್ ದೇವಗಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

5 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

5 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

5 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

7 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

7 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago