ಮೈಸೂರಿನ ಪರಸಯ್ಯನಹುಂಡಿ ವರ್ತುಲ ರಸ್ತೆಯ ವೃತ್ತದಲ್ಲಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತಿದೆ.
ಈ ಜಂಕ್ಷನ್ನಲ್ಲಿ ವಾಹನ ಹೆಚ್ಚಾಗಿರುವುದರಿಂದ ಸಿಗ್ನಲ್ ಅಳವಡಿಸಲಾಗಿದೆ. ದಟ್ಟಣೆ ಆದರೆ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ಗಳು ಹಾಗೂ ಕೆಲ ಖಾಸಗಿ ವಾಹನಗಳು ಜನರನ್ನು ಹತ್ತಿಸಿಕೊಳ್ಳಲು ಸಿಗ್ನಲ್ ಪಕ್ಕದಲ್ಲೇ ನಿಲುಗಡೆ ನೀಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ.
ಅಲ್ಲದೆ ಕೆಲ ಖಾಸಗಿ ವಾಹನಗಳು ಜನರನ್ನು ಹತ್ತಿಸಿಕೊಳ್ಳುವ ಸಲುವಾಗಿ ಸಿಗ್ನಲ್ ಸಮೀಪವೇ ರಸ್ತೆಯಲ್ಲಿ ಹೆಚ್ಚು ಸಮಯ ನಿಂತಿರುತ್ತವೆ. ಇದರಿಂದ ಹಿಂದೆ ಬರುವ ವಾಹನಗಳು ಮುಂದೆ ಸಂಚರಿಸಲು ಪರದಾಡುವಂತಾಗುತ್ತದೆ. ಜತೆಗೆ ಈ ವೃತ್ತದಿಂದ 100 ಮೀ. ಅಂತರದಲ್ಲಿಯೇ ಪೊಲೀಸ್ ಚೆಕ್ ಪೋಸ್ಟ್ ಇದ್ದರೂ ಇಲ್ಲಿನ ಟ್ರಾಫಿಕ್ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೊಲೀಸ್ ಚೆಕ್ ಪೋಸ್ಟ್ ಸಮೀಪದಲ್ಲಿಯೇ ಬಸ್ ನಿಲ್ದಾಣ ನಿರ್ಮಿಸಿ ಅಲ್ಲಿಯೇ ನಿಲುಗಡೆ ನೀಡುವಂತೆ ಮಾಡಬೇಕಿದೆ. ಇದರಿಂದ ವಾಹನ ದಟ್ಟಣೆಯೂ ಕಡಿಮೆಯಾಗಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗುತ್ತದೆ.
-ಮಂಜೇಶ್ ದೇವಗಳ್ಳಿ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…