ಮೈಸೂರಿನ ಪರಸಯ್ಯನಹುಂಡಿ ವರ್ತುಲ ರಸ್ತೆಯ ವೃತ್ತದಲ್ಲಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತಿದೆ.
ಈ ಜಂಕ್ಷನ್ನಲ್ಲಿ ವಾಹನ ಹೆಚ್ಚಾಗಿರುವುದರಿಂದ ಸಿಗ್ನಲ್ ಅಳವಡಿಸಲಾಗಿದೆ. ದಟ್ಟಣೆ ಆದರೆ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ಗಳು ಹಾಗೂ ಕೆಲ ಖಾಸಗಿ ವಾಹನಗಳು ಜನರನ್ನು ಹತ್ತಿಸಿಕೊಳ್ಳಲು ಸಿಗ್ನಲ್ ಪಕ್ಕದಲ್ಲೇ ನಿಲುಗಡೆ ನೀಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ.
ಅಲ್ಲದೆ ಕೆಲ ಖಾಸಗಿ ವಾಹನಗಳು ಜನರನ್ನು ಹತ್ತಿಸಿಕೊಳ್ಳುವ ಸಲುವಾಗಿ ಸಿಗ್ನಲ್ ಸಮೀಪವೇ ರಸ್ತೆಯಲ್ಲಿ ಹೆಚ್ಚು ಸಮಯ ನಿಂತಿರುತ್ತವೆ. ಇದರಿಂದ ಹಿಂದೆ ಬರುವ ವಾಹನಗಳು ಮುಂದೆ ಸಂಚರಿಸಲು ಪರದಾಡುವಂತಾಗುತ್ತದೆ. ಜತೆಗೆ ಈ ವೃತ್ತದಿಂದ 100 ಮೀ. ಅಂತರದಲ್ಲಿಯೇ ಪೊಲೀಸ್ ಚೆಕ್ ಪೋಸ್ಟ್ ಇದ್ದರೂ ಇಲ್ಲಿನ ಟ್ರಾಫಿಕ್ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೊಲೀಸ್ ಚೆಕ್ ಪೋಸ್ಟ್ ಸಮೀಪದಲ್ಲಿಯೇ ಬಸ್ ನಿಲ್ದಾಣ ನಿರ್ಮಿಸಿ ಅಲ್ಲಿಯೇ ನಿಲುಗಡೆ ನೀಡುವಂತೆ ಮಾಡಬೇಕಿದೆ. ಇದರಿಂದ ವಾಹನ ದಟ್ಟಣೆಯೂ ಕಡಿಮೆಯಾಗಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗುತ್ತದೆ.
-ಮಂಜೇಶ್ ದೇವಗಳ್ಳಿ, ಮೈಸೂರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…