Andolana originals

ಓದುಗರ ಪತ್ರ| ‘ಕನ್ನಡ ಮಾತಾಡಿ ಸೈಬರ್ ಸ್ಯಾಮ್‌ನಿಂದ ಪಾರಾಗಿ’

‘ಕನ್ನಡದಲ್ಲಿ ಮಾತನಾಡಿ ಸೈಬರ್ ಸ್ಯಾಮ್‌ನಿಂದ ಪಾರಾಗಿ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಕರೆ ನೀಡಿದ್ದಾರೆ. ಇದು ತಮಾಷೆ ಅನಿಸಿದರೂ ಸತ್ಯವಾದ ಮಾತು.

ಬಹುತೇಕ ಆನ್‌ಲೈನ್ ಸ್ಯಾಮ್‌ಗಳ ಮೂಲ ಹಿಂದಿ ಭಾಷೆ ಮಾತನಾಡುವ ರಾಜ್ಯಗಳದ್ದಾಗಿದ್ದು, ಈ ಸ್ಯಾಮ್ ಮಾಡುವವರು ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳಲ್ಲಿ ಮಾತನಾಡುತ್ತಾರೆ. ಅವರಿಗೆ ಸ್ಪಂದಿಸಿದರೆ ಅವರು ಇನ್ನೂ ಉತ್ತೇಜಿತರಾಗಿ ತಮ್ಮ ಕುಕೃತ್ಯಗಳನ್ನು ಮುಂದುವರಿಸುತ್ತಾರೆ. ಇಂಗ್ಲಿಷ್ ಭಾಷೆಯಲ್ಲಿ ಉತ್ತರಿಸಿದರೆ ಸ್ವಲ್ಪ ತಡವರಿಸುತ್ತಾರೆ. ಒಂದು ವೇಳೆ ಕನ್ನಡದಲ್ಲಿ ಮಾತನಾಡಿದರೆ ಫೋನ್ ಕಟ್ ಮಾಡುತ್ತಾರೆ. ಆದರೆ ಬಹುತೇಕ ಕನ್ನಡಿಗರು ಹಿಂದಿಯಲ್ಲಿ ಮಾತನಾಡಲು ಹೋಗಿ ವಂಚಕರ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಈ ಆನ್ ಲೈನ್ ವಂಚನೆ ಪ್ರಕರಣಗಳು ಕರ್ನಾಟಕಕ್ಕಿಂತ ತಮಿಳುನಾಡಿನಲ್ಲಿ ತೀರಾ ಕಡಿಮೆ ಎನ್ನಲಾಗಿದೆ. ಕಾರಣ ಅಲ್ಲಿನ ಜನರು ಯಾವುದೇ ಕರೆಗಳು ಬಂದರೂ ತಮಿಳಿನಲ್ಲಿ ಉತ್ತರಿಸುತ್ತಾರೆ. ಇದರಿಂದಾಗಿ ಅವರು ವಂಚನೆಗಳಿಗೆ ತುತ್ತಾಗುವುದು ಕಡಿಮೆ. ಆದ್ದರಿಂದ ಪೊಲೀಸ್ ಆಧಿಕಾರಿಯೊಬ್ಬರು ಹೇಳಿರುವಂತೆ ನಾವೂ ಇಂತಹ ಅನುಮಾನಾಸ್ಪದ ಕರೆಗಳು ಬಂದಾಗ ಕನ್ನಡದಲ್ಲಿಯೇ ಮಾತನಾಡುವುದರಿಂದ ವಂಚನೆಗಳಿಂದ ಪಾರಾಗಬಹುದು ಅನಿಸುತ್ತದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

5 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

18 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

22 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

1 hour ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

5 hours ago