Andolana originals

ಓದುಗರ ಪತ್ರ| ‘ಕನ್ನಡ ಮಾತಾಡಿ ಸೈಬರ್ ಸ್ಯಾಮ್‌ನಿಂದ ಪಾರಾಗಿ’

‘ಕನ್ನಡದಲ್ಲಿ ಮಾತನಾಡಿ ಸೈಬರ್ ಸ್ಯಾಮ್‌ನಿಂದ ಪಾರಾಗಿ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಕರೆ ನೀಡಿದ್ದಾರೆ. ಇದು ತಮಾಷೆ ಅನಿಸಿದರೂ ಸತ್ಯವಾದ ಮಾತು.

ಬಹುತೇಕ ಆನ್‌ಲೈನ್ ಸ್ಯಾಮ್‌ಗಳ ಮೂಲ ಹಿಂದಿ ಭಾಷೆ ಮಾತನಾಡುವ ರಾಜ್ಯಗಳದ್ದಾಗಿದ್ದು, ಈ ಸ್ಯಾಮ್ ಮಾಡುವವರು ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳಲ್ಲಿ ಮಾತನಾಡುತ್ತಾರೆ. ಅವರಿಗೆ ಸ್ಪಂದಿಸಿದರೆ ಅವರು ಇನ್ನೂ ಉತ್ತೇಜಿತರಾಗಿ ತಮ್ಮ ಕುಕೃತ್ಯಗಳನ್ನು ಮುಂದುವರಿಸುತ್ತಾರೆ. ಇಂಗ್ಲಿಷ್ ಭಾಷೆಯಲ್ಲಿ ಉತ್ತರಿಸಿದರೆ ಸ್ವಲ್ಪ ತಡವರಿಸುತ್ತಾರೆ. ಒಂದು ವೇಳೆ ಕನ್ನಡದಲ್ಲಿ ಮಾತನಾಡಿದರೆ ಫೋನ್ ಕಟ್ ಮಾಡುತ್ತಾರೆ. ಆದರೆ ಬಹುತೇಕ ಕನ್ನಡಿಗರು ಹಿಂದಿಯಲ್ಲಿ ಮಾತನಾಡಲು ಹೋಗಿ ವಂಚಕರ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಈ ಆನ್ ಲೈನ್ ವಂಚನೆ ಪ್ರಕರಣಗಳು ಕರ್ನಾಟಕಕ್ಕಿಂತ ತಮಿಳುನಾಡಿನಲ್ಲಿ ತೀರಾ ಕಡಿಮೆ ಎನ್ನಲಾಗಿದೆ. ಕಾರಣ ಅಲ್ಲಿನ ಜನರು ಯಾವುದೇ ಕರೆಗಳು ಬಂದರೂ ತಮಿಳಿನಲ್ಲಿ ಉತ್ತರಿಸುತ್ತಾರೆ. ಇದರಿಂದಾಗಿ ಅವರು ವಂಚನೆಗಳಿಗೆ ತುತ್ತಾಗುವುದು ಕಡಿಮೆ. ಆದ್ದರಿಂದ ಪೊಲೀಸ್ ಆಧಿಕಾರಿಯೊಬ್ಬರು ಹೇಳಿರುವಂತೆ ನಾವೂ ಇಂತಹ ಅನುಮಾನಾಸ್ಪದ ಕರೆಗಳು ಬಂದಾಗ ಕನ್ನಡದಲ್ಲಿಯೇ ಮಾತನಾಡುವುದರಿಂದ ವಂಚನೆಗಳಿಂದ ಪಾರಾಗಬಹುದು ಅನಿಸುತ್ತದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

39 mins ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

2 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

2 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

3 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

3 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

6 hours ago