‘ಕನ್ನಡದಲ್ಲಿ ಮಾತನಾಡಿ ಸೈಬರ್ ಸ್ಯಾಮ್ನಿಂದ ಪಾರಾಗಿ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಕರೆ ನೀಡಿದ್ದಾರೆ. ಇದು ತಮಾಷೆ ಅನಿಸಿದರೂ ಸತ್ಯವಾದ ಮಾತು.
ಬಹುತೇಕ ಆನ್ಲೈನ್ ಸ್ಯಾಮ್ಗಳ ಮೂಲ ಹಿಂದಿ ಭಾಷೆ ಮಾತನಾಡುವ ರಾಜ್ಯಗಳದ್ದಾಗಿದ್ದು, ಈ ಸ್ಯಾಮ್ ಮಾಡುವವರು ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳಲ್ಲಿ ಮಾತನಾಡುತ್ತಾರೆ. ಅವರಿಗೆ ಸ್ಪಂದಿಸಿದರೆ ಅವರು ಇನ್ನೂ ಉತ್ತೇಜಿತರಾಗಿ ತಮ್ಮ ಕುಕೃತ್ಯಗಳನ್ನು ಮುಂದುವರಿಸುತ್ತಾರೆ. ಇಂಗ್ಲಿಷ್ ಭಾಷೆಯಲ್ಲಿ ಉತ್ತರಿಸಿದರೆ ಸ್ವಲ್ಪ ತಡವರಿಸುತ್ತಾರೆ. ಒಂದು ವೇಳೆ ಕನ್ನಡದಲ್ಲಿ ಮಾತನಾಡಿದರೆ ಫೋನ್ ಕಟ್ ಮಾಡುತ್ತಾರೆ. ಆದರೆ ಬಹುತೇಕ ಕನ್ನಡಿಗರು ಹಿಂದಿಯಲ್ಲಿ ಮಾತನಾಡಲು ಹೋಗಿ ವಂಚಕರ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಈ ಆನ್ ಲೈನ್ ವಂಚನೆ ಪ್ರಕರಣಗಳು ಕರ್ನಾಟಕಕ್ಕಿಂತ ತಮಿಳುನಾಡಿನಲ್ಲಿ ತೀರಾ ಕಡಿಮೆ ಎನ್ನಲಾಗಿದೆ. ಕಾರಣ ಅಲ್ಲಿನ ಜನರು ಯಾವುದೇ ಕರೆಗಳು ಬಂದರೂ ತಮಿಳಿನಲ್ಲಿ ಉತ್ತರಿಸುತ್ತಾರೆ. ಇದರಿಂದಾಗಿ ಅವರು ವಂಚನೆಗಳಿಗೆ ತುತ್ತಾಗುವುದು ಕಡಿಮೆ. ಆದ್ದರಿಂದ ಪೊಲೀಸ್ ಆಧಿಕಾರಿಯೊಬ್ಬರು ಹೇಳಿರುವಂತೆ ನಾವೂ ಇಂತಹ ಅನುಮಾನಾಸ್ಪದ ಕರೆಗಳು ಬಂದಾಗ ಕನ್ನಡದಲ್ಲಿಯೇ ಮಾತನಾಡುವುದರಿಂದ ವಂಚನೆಗಳಿಂದ ಪಾರಾಗಬಹುದು ಅನಿಸುತ್ತದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…