ಓದುಗರ ಪತ್ರ
ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ( ಇವರನ್ನು ಕೂಡ ಸ್ಪೀಕರ್ ಎಂದು ಕರೆಯಬಹುದು) ಬಸವರಾಜ ಹೊರಟ್ಟಿ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಈಗ ಬಹಿರಂಗವಾಗಿದೆ.
ಬಸವರಾಜ ಹೊರಟ್ಟಿಯವರು ಯು.ಟಿ. ಖಾದರ್ ರವರಿಗೆ ಬಹಿರಂಗ ಪತ್ರ ಬರೆದು ತಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿರುವ ಖಾದರ್ ಹೊರಟ್ಟಿಯವರು ತಮ್ಮ ಹಿರಿಯ ಅಣ್ಣನ ಸಮಾನರಾಗಿದ್ದು, ಆಗಿರುವ ಲೋಪಗಳನ್ನು ಮುಂದೆ ಸರಿಪಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಸ್ವಾಭಿಮಾನ ಬದುಕಿಗೆ ಶಿಕ್ಷಣವೇ ಮದ್ದು : ಸಿಎಂ ಸಿದ್ದರಾಮಯ್ಯ
ಹೊರಟ್ಟಿಯವರು ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಪಳಗಿದ್ದಾರೆ. ಜನತಾ ಪರಿವಾರದ ಓರ್ವ ಹಿರಿಯ ನಾಯಕರಾಗಿದ್ದ ಅವರು ನಂತರದಲ್ಲಿ ಜಾ.ದಳಕ್ಕೆ ಸೇರಿದ್ದರು. ವಿಧಾನ ಪರಿಷತ್ತಿಗೆ ಶಿಕ್ಷಕರ ಕ್ಷೇತ್ರದಿಂದ ಹಲವು ಬಾರಿ ಆರಿಸಿ ಬಂದಿರುವ ಹೊರಟ್ಟಿ ವಿಧಾನ ಪರಿಷತ್ತಿನ ಸಭಾಪತಿಯಾಗಿಯೂ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಹಿರಿಯ ರಾಜಕೀಯ ಮುತ್ಸದ್ದಿ ಪಕ್ಷಾತೀತವಾಗಿ ಎಲ್ಲರಿಂದಲೂ ಗೌರವಿಸಲ್ಪಡುತ್ತಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತು ರಾಜ್ಯ ವಿಧಾನ ಮಂಡಲದ ಎರಡು ಕಣ್ಣುಗಳಿದ್ದ ಹಾಗೆ. ಈ ಎರಡೂ ಕಣ್ಣುಗಳ ರೆಪ್ಪೆಗಳಾಗಿ ಖಾದರ್ ಹಾಗೂ ಹೊರಟ್ಟಿಯವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಬ್ಬರೂ ಪರಸ್ಪರ ಹೊಂದಿಕೊಂಡು ಕಾರ್ಯ ನಿರ್ವಹಿಸುವುದು ಪ್ರಜಾಪ್ರಭುತ್ವದ ಯಶಸ್ಸಿಗೆ ಅಗತ್ಯವಾಗಿದೆ.
-ಕೆ.ವಿ.ವಾಸು, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…