Andolana originals

ಓದುಗರ ಪತ್ರ| ಆರೋಗ್ಯ ಕೇಂದ್ರ ಆರಂಭಿಸಿ

ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗಕ್ಕಾಗಿ ಹೊರ ಜಿಲ್ಲೆಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಚಾಮರಾಜನಗರ ಜಿಲ್ಲೆಯಲ್ಲಿಯೇ ಒಂದು ಸುಸಜ್ಜಿತ ಸ್ನಾತಕೋತ್ತರ ಕೇಂದ್ರವನ್ನು ಆರಂಭಿಸಲಾಯಿತು.

‘ಹಿಂದುಳಿದ ಜಿಲ್ಲೆ’ ಎಂಬ ಹಣೆಪಟ್ಟಿಯನ್ನು ತೊಡೆದುಹಾಕಿ ಅಭಿವೃದ್ಧಿಯತ್ತ ಸಾಗುತ್ತಿರುವ ಚಾ.ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈ ಸ್ನಾತಕೋತ್ತರ ಕೇಂದ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ನೂರಾರು ವಿದ್ಯಾರ್ಥಿಗಳು ಇಲ್ಲಿನ ವಿದ್ಯಾರ್ಥಿ ನಿಲಯಗಳಲ್ಲಿಯೇ ವಾಸ್ತವ್ಯ ಹೂಡಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಈ ಕ್ಯಾಂಪಸ್‌ನಲ್ಲಿ ಆರೋಗ್ಯ ಕೇಂದ್ರ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಆರೋಗ್ಯ ಸಮಸ್ಯೆಗಳಾದಾಗ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಾಗಿದೆ. ಕ್ಯಾಂಪಸ್ ಸಮೀಪ ದಲ್ಲಿಯೇ ಮರಿಯಾಲದ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆಯಾದರೂ, ಅಲ್ಲಿ ಕೆಲ ಬಾರಿ ವೈದ್ಯರೇ ಇರುವುದಿಲ್ಲ.

ಅಲ್ಲದೆ ವಿದ್ಯಾರ್ಥಿಗಳು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವಷ್ಟು ಆರ್ಥಿಕವಾಗಿಯೂ ಶಕ್ತರಲ್ಲ. ಆದ್ದರಿಂದ ಸಂಬಂಧಪಟ್ಟವರು ಈ ಬಗೆ ಗಮನಹರಿಸಿ ಸ್ನಾತಕೋತ್ತರ ಕೇಂದ್ರದೊಳಗೆಯೇ ಒಂದು ಆಸ್ಪತ್ರೆ ನಿರ್ಮಿಸಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

13 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

13 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

13 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

13 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

14 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

14 hours ago