ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗಕ್ಕಾಗಿ ಹೊರ ಜಿಲ್ಲೆಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಚಾಮರಾಜನಗರ ಜಿಲ್ಲೆಯಲ್ಲಿಯೇ ಒಂದು ಸುಸಜ್ಜಿತ ಸ್ನಾತಕೋತ್ತರ ಕೇಂದ್ರವನ್ನು ಆರಂಭಿಸಲಾಯಿತು.
‘ಹಿಂದುಳಿದ ಜಿಲ್ಲೆ’ ಎಂಬ ಹಣೆಪಟ್ಟಿಯನ್ನು ತೊಡೆದುಹಾಕಿ ಅಭಿವೃದ್ಧಿಯತ್ತ ಸಾಗುತ್ತಿರುವ ಚಾ.ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈ ಸ್ನಾತಕೋತ್ತರ ಕೇಂದ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ನೂರಾರು ವಿದ್ಯಾರ್ಥಿಗಳು ಇಲ್ಲಿನ ವಿದ್ಯಾರ್ಥಿ ನಿಲಯಗಳಲ್ಲಿಯೇ ವಾಸ್ತವ್ಯ ಹೂಡಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಈ ಕ್ಯಾಂಪಸ್ನಲ್ಲಿ ಆರೋಗ್ಯ ಕೇಂದ್ರ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಆರೋಗ್ಯ ಸಮಸ್ಯೆಗಳಾದಾಗ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಾಗಿದೆ. ಕ್ಯಾಂಪಸ್ ಸಮೀಪ ದಲ್ಲಿಯೇ ಮರಿಯಾಲದ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆಯಾದರೂ, ಅಲ್ಲಿ ಕೆಲ ಬಾರಿ ವೈದ್ಯರೇ ಇರುವುದಿಲ್ಲ.
ಅಲ್ಲದೆ ವಿದ್ಯಾರ್ಥಿಗಳು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವಷ್ಟು ಆರ್ಥಿಕವಾಗಿಯೂ ಶಕ್ತರಲ್ಲ. ಆದ್ದರಿಂದ ಸಂಬಂಧಪಟ್ಟವರು ಈ ಬಗೆ ಗಮನಹರಿಸಿ ಸ್ನಾತಕೋತ್ತರ ಕೇಂದ್ರದೊಳಗೆಯೇ ಒಂದು ಆಸ್ಪತ್ರೆ ನಿರ್ಮಿಸಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…