Andolana originals

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ. ಆಗಿದ್ದು, ಇದರಲ್ಲಿ ೩.೧೦ ಲಕ್ಷ ಕೋಟಿ ರೂ. ರಾಜಸ್ವ ವೆಚ್ಚಕ್ಕೆ ಹಾಗೂ ೭೩,೦೦೦ ಕೋಟಿ ರೂ. ಬಂಡವಾಳ ವೆಚ್ಚಕ್ಕೆ ಮೀಸಲಿಡಲಾಗಿದೆ. ವಿತ್ತೀಯ ಕೊರತೆಯನ್ನು ಜಿಎಸ್‌ಟಿಯ ಶೇ.೨೯ರಷ್ಟು ನಿಯಂತ್ರಣದಲ್ಲಿಡಲಾಗಿದೆ.

ಇದು ರಾಜ್ಯದ ಆರ್ಥಿಕ ಶಿಸ್ತನ್ನು ಪ್ರತಿಬಿಂಬಿಸುತ್ತದೆ. ಯುವಜನತೆಗೆ ಈ ಬಜೆಟ್ ಹೊಸ ಭರವಸೆ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಸಂಚಾರ ದಟ್ಟಣೆ ನಿವಾರಿಸಲು ಸುರಂಗ ಮಾರ್ಗಕ್ಕೆ ೪೦,೦೦೦ ಕೋಟಿ ರೂ. ಮೀಸಲಿಡಲಾಗಿದೆ. ಮೆಟ್ರೋ ೩ನೇ ಹಂತದ ಕಾಮಗಾರಿಗೆ ಅನುದಾನ. ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ ಘೋಷಣೆ. ಪ್ರತಿ ಹಳ್ಳಿಯಲ್ಲೂ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಗುರಿ ಹೊಂದಲಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳ ನವೀಕರಣಕ್ಕೆ ೨,೦೦೦ ಕೋಟಿ ರೂ. ಹಾಗೂ ಗ್ರಾಮೀಣ ಜನರಿಗೆ ಮನೆ ಬಾಗಿಲಿಗೆ ಚಿಕಿತ್ಸೆ ನೀಡಲು ೧೦೦ ಹೊಸ ಸಂಚಾರ ಕ್ಲಿನಿಕ್‌ಗಳನ್ನು ಆರಂಭಿಸುವುದು ; ಉತ್ತಮ ಯೋಜನೆ. ಈ ಬಜೆಟ್ ಕೃಷಿ,ಕೈಗಾರಿಕೆ ಮತ್ತು ತಂತ್ರಜ್ಞಾನದ ಸಮನ್ವಯದೊಂದಿಗೆ ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸುವ ದಿಕ್ಸೂಚಿಯಾಗಿದೆ.

-ಎ. ಎಂ.ಅಂಜಲಿ, ಅರಸಿನಕೆರೆ ಗ್ರಾಮ, ಜಯಪುರ ಹೋಬಳಿ, ಮೈಸೂರು ತಾ.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

1 hour ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

1 hour ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago