Andolana originals

ಓದುಗರ ಪತ್ರ: ಹಂಪಾಪುರ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಿ

ಎಚ್.ಡಿ.ಕೋಟೆ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿದ್ದು, ಸರಿಯಾದ ಮೂಲ ಸೌಕರ್ಯಗಳಿಲ್ಲದೆ ಈ ಭಾಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ನಗರ ಭಾಗದಲ್ಲಿರುವ ಖಾಸಗಿ ಶಾಲೆಗಳ ಮೊರೆ ಹೋಗುವಂತಾಗಿದೆ.  ತಾಲ್ಲೂಕಿನಲ್ಲಿ ಅನೇಕ ಕುಗ್ರಾಮಗಳು, ಆದಿವಾಸಿ ಸಮುದಾಯಗಳ ಹಾಡಿಗಳು ಹೆಚ್ಚಾಗಿವೆ. ಇಲ್ಲಿನ ಮಕ ಳು ವಸತಿ ಮತ್ತು ವಿದ್ಯಾಭ್ಯಾಸಕ್ಕಾಗಿ  ಮೊರಾರ್ಜಿ  ದೇಸಾಯಿ ವಸತಿ  ಶಾಲೆಗಳನ್ನು  ಆಶ್ರಯಿಸಿದ್ದಾರೆ. ತಾಲ್ಲೂಕಿನಲ್ಲಿ ಮೂರು ವಸತಿ ಶಾಲೆಗಳಿದ್ದು, ಅಣ್ಣೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮೇಟಿಕುಪೆ  ಸಮೀಪದ ಸೊಳೆ ಪುರ ಹಾಡಿಯಲ್ಲಿ ಒಂದು ಶಾಲೆ ಇದ ರೆ, ಅಂತರಸಂತೆ ಸಮೀಪದ ಶಿರಮಹಳ್ಳಿ ಬಳಿ ಒಂದು ಶಾಲೆ,  ಕೆ.ಬೆಳತ್ತೂರು ಗ್ರಾಮದಲ್ಲಿ ಮತ್ತೊಂದು ಶಾಲೆ ಇದೆ. ಸದ್ಯಕೆ  ಈ ಮೂರೂ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಮತ್ತಷ್ಟು ಶಾಲೆಗಳನ್ನು ತೆರೆದು ಸರ್ಕಾರ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಿದೆ.  ಹೈರಿಗೆ ವ್ಯಾಪ್ತಿ ಸೇರಿದಂತೆ ಹಂಪಾಪುರ ಹೋಬಳಿ ಕೆಂದ್ರದಲ್ಲಿಯೂ ಒಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಿದರೆ ಅಕ್ಕ-ಪಕ್ಕದ ೨೦ರಿಂದ ೩೦ ಗ್ರಾಮಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.  ಇದರಿಂದ ಮಕ್ಕಳು ದುಬಾರಿ ಶುಲ್ಕ ಪಾವತಿಸಿ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವ ಗೋಳು ತಪ್ಪುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಹಂಪಾಪುರ ಅಥವಾ ಹೊಮ್ಮರಗಳ್ಳಿ ಸಮೀಪ ಮತ್ತೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತೆರೆಯಬೇಕಿದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago